Thursday, April 17, 2025
Thursday, April 17, 2025

ದ್ವೇಷಪೂರಿತ ಭಾಷಣ ಹೆಚ್ಚಾಗುತ್ತಿದೆ ರಾಜ್ಯಸಭೆಯಲ್ಲಿ ಕಳವಳ ವ್ಯಕ್ತ

Date:

ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುವುದು ಹೆಚ್ಚುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ತಿಳಿಸಿದರು.

ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳುವಂತೆ ವಿವಾದಾತ್ಮಕ ಸಂತ ಯತಿ ನರಸಿಂಗಾನಂದ ಅವರು ಹಿಂದೂಗಳಿಗೆ ಕರೆ ನೀಡುತ್ತಿರುವುದು ಕಳವಳಕಾರಿ ಎಂದೂ ಕಾಂಗ್ರೆಸ್‌ ಸದಸ್ಯರು ಹೇಳಿದರು.
ನಿಗದಿತ ಕಲಾಪದ ಬದಲಾಗಿ, ನಿಯಮ 267ರಡಿ ಈ ವಿಷಯ ಕುರಿತು ಪ್ರಸ್ತಾಪಿಸಲು ಅವಕಾಶ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅಲ್ಪಸಂಖ್ಯಾತರ ವಿರುದ್ದದ ದ್ವೇಷ ಭಾಷಣ ಹಾಗೂ ಕೆಲ ಆನ್‌ಲೈನ್‌ ಮಾಧ್ಯಮಗಳ ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ನೀಡುವಂತೆಯೂ ಅವರು ನೋಟಿಸ್‌ ನೀಡಿದ್ದರು.

ಈ ಮನವಿಯನ್ನು ತಿರಸ್ಕರಿಸಿದ ಸಭಾಪತಿ ವೆಂಕಯ್ಯ ನಾಯ್ಡು ಅವರು, ‘ಯಾವುದೇ ಸಮುದಾಯದ ಹೆಸರು ಸಹ ಕಡತಕ್ಕೆ ಹೋಗುವುದಿಲ್ಲ. ವ್ಯಕ್ತಿಯೊಬ್ಬ ಅರ್ಥಹೀನ ಪದ ಬಳಸಿ ಮಾತನಾಡಿದ್ದರೆ, ಅದನ್ನು ಇಲ್ಲಿ ಹೇಳಬಾರದು. ಅದನ್ನೇ ಸದನದಲ್ಲಿ ಮತ್ತೆ ಪ್ರಸ್ತಾಪಿಸಿ ಚರ್ಚಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಇದಕ್ಕೆ ಅವಕಾಶ ನೀಡಿಲ್ಲ ಎಂದರು.

ಖರ್ಗೆ ಅವರಲ್ಲದೇ, ಟಿಎಂಸಿಯ ಸುಷ್ಮಿತಾ ದೇವ್, ಲಿಜಿನ್ಹೊ ಫೆಲಿರೊ ಹಾಗೂ ಮೊಹ್ಮದ್ ನದಿಮುಲ್ ಹಕ್ ಅವರು ಸಹ ಈ ಕುರಿತು ಮಾತನಾಡಲು ಅವಕಾಶ ಕೋರಿ ನೋಟಿಸ್‌ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....