Wednesday, October 2, 2024
Wednesday, October 2, 2024

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಅಮಾನತುಗೊಂಡ ರಷ್ಯಾ

Date:

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತು ಮಾಡಿ ವಿಶ್ವ ಸಂಸ್ಥೆಯ ಮಹಾ ಸಭೆಯು ಆದೇಶ ಹೊರಡಿಸಿದೆ.

ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತು ಮಾಡುವ ನಿರ್ಣಯವನ್ನು ಮಹಾ ಸಭೆಯಲ್ಲಿ ಮತಕ್ಕೆ ಹಾಕಲಾಗಿತ್ತು.

ಅಮಾನತು ಮಾಡಬಹುದು ಎಂಬ ನಿರ್ಣಯಕ್ಕೆ ಹೆಚ್ಚಿನ ಮತಗಳು ಬಂದ ಕಾರಣ, ಮಹಾ ಸಭೆಯು ಈ ಕ್ರಮ ತೆಗೆದುಕೊಂಡಿದೆ.

ಉಕ್ರೇನ್‌ನ ಬುಕಾ ನಗರದಿಂದ ವಾಪಸ್ಸಾಗುವಾಗ ರಷ್ಯಾ ಸೇನೆಯು ನೂರಾರು ನಾಗರಿಕರನ್ನು ಕೊಂದು ಹಾಕಿದೆ ಎಂದು ಉಕ್ರೇನ್‌ ಆರೋಪಿಸಿತ್ತು.

ಉಕ್ರೇನ್‌ನಲ್ಲಿ ರಷ್ಯಾ ಎಸಗಿರಬಹುದಾದ ಯುದ್ಧಾಪರಾಧಗಳ ಕಾರಣ ಮಾನವ ಹಕ್ಕುಗಳ ಮಂಡಳಿಯಿಂದ ಅದನ್ನು ಅಮಾನತು ಮಾಡುವ ನಿರ್ಣಯವನ್ನು ಮಹಾ ಸಭೆ ಮಂಡಿಸಿತ್ತು.
ನಿರ್ಣಯವು ಅಂಗೀಕಾರವಾಗಲು ಮತ ಹಾಕಿದ ಸದಸ್ಯರ ಒಟ್ಟು
ಸಂಖ್ಯೆಯ ಮೂರನೇ ಎರಡರಷ್ಟು ಮತಗಳು ಬೇಕಿತ್ತು. 58 ದೇಶಗಳು ಮತದಾನದಿಂದ ದೂರ ಉಳಿದ ಕಾರಣ, ನಿರ್ಣಯದಲ್ಲಿದ್ದ ಸದಸ್ಯ ದೇಶಗಳ ಸಂಖ್ಯೆ 117ಕ್ಕೆ ಕುಸಿದಿತ್ತು. 93 ದೇಶಗಳು ಪರವಾಗಿ ಮತಹಾಕಿದ ಕಾರಣ, ನಿರ್ಣಯವು ಅಂಗೀಕಾರವಾಯಿತು.

193 ಸದಸ್ಯ ರಾಷ್ಟ್ರಗಳ ಮಹಾ ಸಭೆಯಲ್ಲಿ ಈ ನಿರ್ಣಯವನ್ನು ಗುರುವಾರ ಮತಕ್ಕೆ ಹಾಕಲಾಗಿತ್ತು. ನಿರ್ಣಯದ ಪರವಾಗಿ 93 ದೇಶಗಳು ಮತ ಹಾಕಿದವು. ನಿರ್ಣಯದ ವಿರುದ್ಧವಾಗಿ 24 ದೇಶಗಳು ಮತ ಹಾಕಿದವು. ಭಾರತವೂ ಸೇರಿ 58 ದೇಶ
ಗಳು ಮತದಾನದಿಂದ ದೂರ ಉಳಿದವು.

58 ದೇಶಗಳು ಮತದಾನದಿಂದ ದೂರ ಉಳಿದುದ್ದರ ಬಗ್ಗೆ ರಷ್ಯಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಮತದಾನದಿಂದ ದೂರ ಉಳಿದಿದ್ದನ್ನು ನಾವು, ನಿರ್ಣಯದ ಪರವಾದ ಮತ ಎಂದೇ ಪರಿಗಣಿಸುತ್ತೇವೆ. ಇದು ಆಯಾ ದೇಶಗಳೊಂದಿಗೆ, ನಮ್ಮ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರಲಿದೆ ಎಂದು ರಷ್ಯಾ ಎಚ್ಚರಿಕೆ ನೀಡಿದೆ.

ನಾಗರಿಕರ ಹತ್ಯೆಯ ಬಗ್ಗೆ ಭಾರತವು ಆಘಾತ ವ್ಯಕ್ತಪಡಿಸಿತ್ತು. ಬುಕಾದಲ್ಲಿನ ಹತ್ಯೆಗಳ ಕುರಿತು ಸ್ವತಂತ್ರ ತನಿಖೆ ನಡೆಯಬೇಕು ಎಂಬ ಬೇಡಿಕೆಗೆ ಬೆಂಬಲವಿದೆ ಎಂದು ಭಾರತ ಹೇಳಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...