Friday, February 6, 2026
Friday, February 6, 2026

ಶಕ್ತಿ ಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡಿಕೆ – ಸಿಎಂ

Date:

ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ.

ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ಅವರೊಂದಿಗೆ ಶಕ್ತಿಧಾಮದ ಬಗ್ಗೆ ಚರ್ಚೆ ಮಾಡಿದಾಗ ಸಂಸ್ಥೆಗಳಿಗೆ ಅನುದಾನ ನೀಡಬೇಕೆಂಬ ಪ್ರೇರಣೆ ದೊರೆತಿದ್ದಾಗಿ ತಿಳಿಸಿದ ಮುಖ್ಯಮಂತ್ರಿಗಳು ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಆಶಿಸಿದರು.
ನಮ್ಮ ಸರಕಾರ ಹೆಣ್ಣುಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜೊತೆಗೆ ಆರೋಗ್ಯ, ಶಿಕ್ಷಣಕ್ಕೆಂದೆ 40 ಸಾವಿರ ಕೋಟಿ ಮೀಸಲಿಡಲಾಗಿದೆ. ಆಸಿಡ್ ದಾಳಿಗೆ ಒಳಗಾದವರಿಗೆ 2 ಸಾವಿರ ಇದ್ದ ಸಹಾಯಧನವನ್ನು 10 ಸಾವಿರಕ್ಕೆ ವಿಸ್ತರಣೆ ಮಾಡಲಾಗಿದೆ. ಅಲ್ಲದೆ ನಿರಾಶ್ರಿತರಿಗೆ ಹೊಸ ಬದುಕು ಕಟ್ಟಿಕೊಡುತ್ತಿರುವ ಸಂಘಸಂಸ್ಥೆಗಳಿಗೂ ನಮ್ಮ ಸರಕಾರ ಪ್ರೋತ್ಸಾಹ ನೀಡುತ್ತಿದೆ ಎಂದರು.

ಸಮಾಜದ ನೋವಿಗೆ ಚಿಕಿತ್ಸೆ ನೀಡುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು. ಶೋಷಿತರು, ದುರ್ಬಲರನ್ನು ಸಮಾಜ ಮತ್ತು ಸರಕಾರ ಕೈ ಹಿಡಿದು ನಿಲ್ಲಿಸಬೇಕು. ಪ್ರೀತಿ ವಿಶ್ವಾಸವನ್ನು ಸಮಾಜಕ್ಕೆ ಕೊಟ್ಟರೇ ಅದೇ ಪ್ರೀತಿ ಗೌರವ ನಮಗೆ ಸಿಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಳ್ಳೆಯದನ್ನೇ ಮಾಡಬೇಕು. ಒಳ್ಳೆಯದನ್ನೇ ಯೋಚಿಸಬೇಕೆಂದರು.

ತಾಯಂದಿರ ಶೋಷಣೆಯನ್ನು ನಿರಂತರವಾಗಿ ಸಮಾಜ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿರುವುದು ಅತ್ಯಂತ ನೋವಿನ ಸಂಗತಿ.ನಾವೆಲ್ಲಾ ಅಂತ:ಕರಣ ಕಳೆದುಕೊಂಡಾಗ ಬಹಳಷ್ಟು ಮಕ್ಕಳು ಅನಾಥರಾಗುತ್ತಾರೆ, ಶೋಷಣೆಗೆ ಒಳಗಾಗುತ್ತಾರೆ ಎಂದರು.

ಶಕ್ತಿಧಾಮ ಎಂಬುದು ಸರಿಯಾದ ಹೆಸರು. ಸ್ತ್ರೀ ಎಂದರೆ ಶಕ್ತಿ. ಭಗವಂತ ಸೃಷ್ಟಿ ಮಾಡುವ ಅಮೂಲ್ಯ ಗುಣವನ್ನು ಹೆಣ್ಣಿಗೆ ನೀಡಿದ್ದಾನೆ. ಪುರುಷ ಪ್ರಧಾನ ಸಮಾಜದಲ್ಲಿ ಗಂಡು ಏನೆಲ್ಲಾ ಮಾಡಿದರೂ ಒಂದು ಮಗುವಿಗೆ ಜನ್ಮ ನೀಡುವ ಶಕ್ತಿಯನ್ನು ಪಡೆದುಕೊಂಡಿಲ್ಲ. ಹಾಗಾಗಿ ಇಂದು ಸರಕಾರ ಮಾಡುವ ಕೆಲಸವನ್ನು ಶಕ್ತಿಧಾಮ ಮಾಡುತ್ತಿದೆ. ಹಾಗಾಗಿ ಬಜೆಟ್‌ನಲ್ಲಿ ಇದಕ್ಕೆ ವಿಶೇಷ ನೆರವು ಘೋಷಿಸಲಾಗಿದೆ ಎಂದರು.

ತಾಯಿ ಕರುಳನ್ನು ತೋರಿದ ಪೋಲಿಸ್ ಅಧಿಕಾರಿ ಕೆಂಪಯ್ಯ ಸಮಾಜದಲ್ಲಿ ಶೋಷಿತ ಹೆಣ್ಣು ಮಕ್ಕಳಿಗೆ ದಾರಿ ತೋರಲು ಡಾ: ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರಲ್ಲಿ ತಿಳಿಸಿದರು. ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಆಶ್ರಯ, ಬದುಕು ನೀಡಬೇಕು ಎಂದು ಆಶ್ರಯದಾತ ಸಂಸ್ಥೆಯಾಗಿ ಶಕ್ತಿಧಾಮವನ್ನು ಡಾ: ರಾಜ್ ಕುಮಾರ್ ಅವರ ಕುಟುಂಬದವರು ಬೆಳೆಸಿದ್ದಾರೆ.

ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ. ಪುನೀತ್ ರಾಜ್ ಕುಮಾರ್ ಅವರಿಗೂ ತಾಯಿ ಕರುಳಿತ್ತು .ಅವರು ಇದ್ದಲ್ಲಿಂದಲೇ ಸಂಸ್ಥೆಗೆ ಶಕ್ತಿ ತುಂಬುತ್ತಿದ್ದಾರೆ. ಸಮಾಜದಲ್ಲಿ ಶೋಷಿತ, ಪೀಡಿತ ದುರ್ಬಲ ವರ್ಗದವರಿಗೆ ಸಮಾಜ ಸರ್ಕಾರ ಕೈ ಹಿಡಿದು ಎತ್ತಿ ನಡೆಸಬೇಕು. ಮಾತುಗಳಲ್ಲಿ ಸಾಮಾಜಿಕ ನ್ಯಾಯ ಆಗುವುದಿಲ್ಲ. ಅವಕಾಶಗಳು ಸಿಕ್ಕಾಗ ಅವರ ಪರವಾಗಿ ಕೆಲಸ ಮಾಡಬೇಕು. ಸಮಾಜದ ನೋವುಗಳಿಗೆ ಚಿಕಿತ್ಸೆ ಕೊಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...