Thursday, December 18, 2025
Thursday, December 18, 2025

ಚಂದ್ರು ಹತ್ಯೆ ಪ್ರಕರಣ ಗೃಹಸಚಿವರ ಹೇಳಿಕೆ ಪ್ರಚೋದನಕಾರಿ ಕಾಂಗ್ರೆಸ್ ದೂರು

Date:

ಉರ್ದು ಮಾತನಾಡದಿದ್ದಕ್ಕೆ ಬೆಂಗಳೂರಿನಲ್ಲಿ ಚಂದ್ರು ಕೊಲೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಅವರು ವಿರುದ್ದ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ.

ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ದೂರು ದಾಖಲಾಗಿದೆ. ಹಾಗೂ ಶಿವಮೊಗ್ಗದಲ್ಲೂ ಸಹ ದೂರು ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ಪಿ ಉದೇಶ್ಗೆ ದೂರು ಸಲ್ಲಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಧಾರ್ಮಿಕ ಭಾವನೆ ಕೆರಳಿಸುವುದು ಮತ್ತು ಸಾಮಾಜಿಕ ಶಾಂತಿ ಹದಗೆಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದಾರೆ.

ಸಮಾಜದಲ್ಲಿ ಶತ್ರುತ್ವ ಬೆಳೆಯಲು ಕಾರಣವಾಗಿ, ಅದರ ಲಾಭ ಪಡೆಯುವ ಉದ್ದೇಶವನ್ನು ಅವರು ಹೊಂದಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡಲು ಮುಂದಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 298, 505ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಚಿವರ ವಿರುದ್ಧ ಹಲವರು ಸಿಟ್ಟಿಗೆದ್ದಿದ್ದಾರೆ.

ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ. ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...