Sunday, December 14, 2025
Sunday, December 14, 2025

ಸ್ವಸಹಾಯ ಸಂಘಗಳ ಆರ್ಥಿಕ ಭದ್ರತೆಗೆ ಆಯಂಕರ್ ಬ್ಯಾಂಕ್ ಆರಂಭ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಹಿಸುದ್ದಿ ನೀಡಿದೆ. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಆರಂಭವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ, ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ ನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಪ್ರಾರಂಭಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ವರ್ಷ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...