Friday, February 6, 2026
Friday, February 6, 2026

ಸ್ವಸಹಾಯ ಸಂಘಗಳ ಆರ್ಥಿಕ ಭದ್ರತೆಗೆ ಆಯಂಕರ್ ಬ್ಯಾಂಕ್ ಆರಂಭ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಹಿಸುದ್ದಿ ನೀಡಿದೆ. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಆರಂಭವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ, ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ ನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಪ್ರಾರಂಭಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ವರ್ಷ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...