Monday, March 23, 2026
Monday, March 23, 2026

ಪೌಷ್ಠಿಕ ಅಕ್ಕಿ ವಿತರಣೆ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನಮೋದನೆ

Date:

ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಫೋರ್ಟಿಫೈಡ್ ಅಕ್ಕಿಯನ್ನ ವಿತರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆ ಹಾಗೂ ಇತರ ಯೋಜನೆಗಳ ಅಡಿಯಲ್ಲಿ ಪೌಷ್ಠಿಕ ಅಕ್ಕಿ ವಿತರಣೆಯನ್ನ ಮೂರು ಹಂತಗಳಲ್ಲಿ ಜಾರಿಗೆ ತರಲಾಗುತ್ತದೆ.

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಿಳಿಸಿದ್ದಾರೆ.

ಭಾರತೀಯ ಆಹಾರ ನಿಗಮ ಮತ್ತು ರಾಜ್ಯ ಸಂಸ್ಥೆಗಳು ಈ ನಿಟ್ಟಿನಲ್ಲಿ ಪೂರೈಕೆ ಮತ್ತು ವಿತರಣೆಗಾಗಿ ಹೆಚ್ಚುವರಿಯಾಗಿ 88.65 ಲಕ್ಷ ಟನ್ ಹೆಚ್ಚುವರಿ ಪೌಷ್ಠಿಕ ಅಕ್ಕಿಯನ್ನು ಈ ಹಿಂದೆ ಸಂಗ್ರಹಿಸಿವೆ ಎಂದು ಅವರು ಮಾಹಿತಿ ತಿಳಿಸಿದ್ದಾರೆ.

ಇದನ್ನು ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಜಾರಿಗೆ ತರಲಾಗುತ್ತದೆ ಎಂದು ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.

ಇದನ್ನು 2024ರ ಸಮಯಕ್ಕೆ ಹಂತ ಹಂತವಾಗಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗುತ್ತದೆ. ಈ ಯೋಜನೆಗೆ ವಾರ್ಷಿಕ 2,700 ಕೋಟಿ ರೂ.ವೆಚ್ಚವಾಗಲಿದೆ. ಇದನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಅನುರಾಗ್ ಠಾಕೂರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...