Tuesday, August 25, 2026
Tuesday, August 25, 2026

ಚಂದ್ರು ಹತ್ಯೆ ಪ್ರಕರಣ ಸಿಐಡಿಯಿಂದ ತನಿಖೆ- ಬಸವರಾಜ ಬೊಮ್ಮಾಯಿ

Date:

ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ.ಸತ್ಯ ಹೊರಬರಬೇಕು. ಅದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಜೊತೆ ಚರ್ಚೆ ಮಾಡಿದ್ದೇನೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಿದ್ದೇವೆ. ನಿಸ್ಪಕ್ಷವಾದ ತನಿಖೆಯಾಗಲಿ, ಸತ್ಯ ಹೊರಬರಲಿ ಎಂದು ಹೇಳಿದ್ದಾರೆ.

ಮೂರು ತಂಡದಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಕಾರ್ಯಕರ್ತರ, ಮುಖಂಡರ ಜೊತೆ ಸಭೆ ಮಾಡುತ್ತೇವೆ. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಜೊತೆಗಿರುತ್ತಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...