Wednesday, December 17, 2025
Wednesday, December 17, 2025

ಬೆಲೆಗಳು ಅತಿಹೆಚ್ಚು ಏರಿಕೆಯಾದದ್ದು ಕಾಂಗ್ರೆಸ್ ಅವಧಿಯಲ್ಲೇ- ಬೊಮ್ಮಾಯಿ

Date:

ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...