Thursday, July 9, 2026
Thursday, July 9, 2026

ಹಿಂದೂ- ಮುಸ್ಲೀಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು-ಯಡಿಯೂರಪ್ಪ

Date:

ವಿನಾಕಾರಣ ಬೆಲೆ ಏರಿಕೆ ವಿಷಯ ದೊಡ್ಡದು ಮಾಡುವುದು ಬೇಡ. ಕಾಂಗ್ರೆಸ್​ನವರಿಗೆ ಬೇರೇನೂ ಚಟುವಟಿಕೆ ಇಲ್ಲ. ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಕಾರ ನೀಡಲಿ. ನಾವೆಲ್ಲರೂ ಒಟ್ಟಾಗಿ ಸೇರಿ ರಾಜ್ಯ ಅಭಿವೃದ್ಧಿ ಮಾಡಬೇಕು. ಸಣ್ಣ ಪುಟ್ಟ ವಿಷಯಗಳಿಗೆ ಗೊಂದಲ ಉಂಟು ಮಾಡಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ.

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಇನ್ಮುಂದೆ ಅಹಿತಕರ ಘಟನೆಗೆ ಅವಕಾಶ ಕೊಡದಿರಲಿ. ಕೆಲ‌ ಕಿಡಿಗೇಡಿಗಳು ಸೌಹಾರ್ದತೆ ಕೆಡಿಸುವ ಕೆಲಸ ಮಾಡ್ತಿದ್ದಾರೆ. ನಾನೂ ಕೂಡ ಅಂಥವರಿಗೆ ಕಿವಿಮಾತು ಹೇಳುತ್ತೇನೆ. ಅಹಿತಕರ ಘಟನೆ ನಡೆಯದಂತೆ ಈಗಾಗಲೇ‌ ಸಿಎಂ ಬೊಮ್ಮಾಯಿ ಎಚ್ಚರಿಕೆಯನ್ನು ಕೂಡ ಕೊಟ್ಟಿದ್ದಾರೆ. ಸರ್ಕಾರ ಇದನ್ನೆಲ್ಲ ಸಹಿಸೋದಿಲ್ಲ. ನಿಮ್ಮ ನಿಮ್ಮ ಕೆಲಸ ಮಾಡಿಕೊಂಡು ಹೋಗಿ. ಯಾರೂ ಸಾಮರಸ್ಯ ಕದಡಬೇಡಿ. ಮುಸ್ಲಿಮರು‌ ನೆಮ್ಮದಿ, ಗೌರವದಿಂದ ಬಾಳಬೇಕಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರು ಹೇಳಿದ್ದಾರೆ.

ನಾಳೆಯಿಂದ 3 ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡ್ತಿದ್ದೇವೆ. ಪಕ್ಷ ಬಲಪಡಿಸಲು ಈ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುತ್ತೇವೆ. ಮುಂದಿನ ಚುನಾವಣೆ ಸಿದ್ಧತೆಗಾಗಿ ಈ ರಾಜ್ಯ ಪ್ರವಾಸ. ಇನ್ಮುಂದೆ ನಿರಂತರವಾಗಿ ರಾಜ್ಯ ಪ್ರವಾಸಗಳು ನಡೆಯುತ್ತವೆ ಎಂದರು.

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಕಾಂಗ್ರೆಸ್​​ನವರ ಅಧಿಕಾರದ ಅವಧಿಯಲ್ಲಿ ಬೆಲೆ ಏರಿಕೆ ಹೇಗಿತ್ತು? ಕಾಂಗ್ರೆಸ್​ಗೆ ಹೋಲಿಸಿದ್ರೆ ಈಗಿನ ದರ ಏನೇನೂ ಇಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...