Tuesday, March 24, 2026
Tuesday, March 24, 2026

ಸಮಯೋಚಿತ ನಿರ್ಧಾರ ಮತ್ತು ಕ್ರಮಗಳನ್ನ ವಿಪಕ್ಷಗಳಿಂದ ಕಲಿಯಬೇಕಿಲ್ಲ- ಬೊಮ್ಮಾಯಿ

Date:

ವಿಚಾರಗಳನ್ನು ಪ್ರಚಾರ ಮಾಡುವ ಸಂಘಟನೆಗಳಿಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಶಾಂತಿ ಕದಡುವ ಶಕ್ತಿಗಳ ಬಗ್ಗೆ ಮುಖ್ಯಮಂತ್ರಿಗಳು ಮೌನವಾಗಿದ್ದಾರೆ. ಇಂತಹ ಕೃತಿಗಳಿಗೆ ಅವರ ಬೆಂಬಲ ಇದೆಯೇ ಎಂದು ವಿರೋಧ ಪಕ್ಷದ ನಾಯಕರು ಪ್ರಶ್ನೆಯನ್ನು ಕೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ಶಾಸಕ ಬಿಎಸ್ ಯಡಿಯೂರಪ್ಪ ಅವರು ಕೋಮುಸೌಹಾರ್ದಕ್ಕೆ ಇದಕ್ಕೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇದರ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ ಕಾನೂನು, ಸುವ್ಯವಸ್ಥೆ ಹಾಗೂ ಸಮಾನತೆಯ ದೃಷ್ಟಿಯಿಂದ ಕೆಲಸ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿರೋಧಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು. ಯಾವಾಗ ಯಾವ ನಿರ್ಧಾರ ಮತ್ತು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ವಿರೋಧ ಪಕ್ಷಗಳಿಂದ ಕಲಿಯಬೇಕಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಹಲವು ಯುವಕರ ಕೊಲೆ ನಡೆದಾಗ, ನೇರವಾಗಿ ಭಾಗಿಯಾಗಿದ್ದ ಸಂಘಟನೆಗಳು ಮತ್ತು ಮುಖಂಡರ ಮೇಲಿದ್ದ ಪ್ರಕರಣಗಳನ್ನು ಕೈಬಿಟ್ಟಾಗ ಕಾಂಗ್ರೆಸ್ ನ ಕರ್ತವ್ಯ ಪ್ರಜ್ಞೆ ಎಲ್ಲಿಗೆ ಹೋಗಿತ್ತು ಎಂದು ಪ್ರಶ್ನಿಸಿದ ಬೊಮ್ಮಾಯಿ, ಶಾಂತಿ-ಸುವ್ಯವಸ್ಥೆ ಇರುವ ಪ್ರಗತಿಪರ ರಾಜ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದು ನಮಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...