Tuesday, August 25, 2026
Tuesday, August 25, 2026

ಕುವೆಂಪು ವಿವಿ ಬೋಧಕೇತರ ಸಿಬ್ಬಂದಿಗೆ ಮುಂಬಡ್ತಿ

Date:

ದಶಕಗಳಿಂದ ಕಗ್ಗಂಟಾಗಿದ್ದ ವಿಶ್ವವಿದ್ಯಾಲಯದ ಬೋಧಕೇತರ ನೌಕರರ ಮುಂಬಡ್ತಿ‌ ಸಮಸ್ಯೆ ಪರಿಹರಿಸಿ ಅರ್ಹ ನೌಕರರಿಗೆ ಕುವೆಂಪು ವಿಶ್ವವಿದ್ಯಾಲಯವು ಆದೇಶ ನೀಡಿದ್ದು, ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಬಳ್ಳೇಕೆರೆ ಸಂತೋಷ್, ಧರ್ಮಪ್ರಸಾದ್, ರಾಮಲಿಂಗಪ್ಪ ಮತ್ತು ರಮೇಶ್ ಬಾಬು ಅವರನ್ನು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಕುಲಪತಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.

2017ರ ಮಾರ್ಚ್ 03ರ ಜೇಷ್ಠತಾ ಪಟ್ಟಿಯ ಅನ್ವಯ ಸಹಾಯಕ‌ ಕುಲಸಚಿವ ವೃಂದದಿಂದ ಪ್ರಥಮ ದರ್ಜೆ ಸಹಾಯಕ ವೃಂದದವರೆಗೆ ಅರ್ಹ ನೌಕರರಿಗೆ ಕಳೆದ ಏಪ್ರಿಲ್ 06 ರಂದು ಮುಂಬಡ್ತಿಯ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ನೀಡಿದ್ದರು.

ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಉಪಕುಲಸಚಿವೆ ಸುಮನ್‌ ಆಚಾರ್, ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಅಲಿ, ಸಿದ್ದರಾಮ, ಸುಶೀಲ, ರೇಖಾ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...