Wednesday, April 22, 2026
Wednesday, April 22, 2026

ಕೋವಿಡ್ ನಾಲ್ಕನೇ ಅಲೆ ಭೀತಿ ಮಾಸ್ಕ್ ಧಾರಣೆ ಮುಂದುವರೆಸಿ- ಡಾ.ಸುಧಾಕರ್

Date:

ಪ್ರಪಂಚಾದ್ಯಂತ ಕೊರೋನಾ ರೂಪಾಂತರಿ ತಳಿ ಹರಡುತ್ತಿದೆ. ಚೀನಾ, ಯೂರೋಪ್ ನಂತರ ಭಾರತದ ಹಲವು ಕಡೆ ಕರೊನಾ ಸೋಂಕು ಹೆಚ್ಚಳದ ಜೊತೆಗೆ ಹೊಸ ರೂಪಾಂತರಿ ವೈರಸ್ ಪತ್ತೆಯಾಗುತ್ತಿದೆ. ನಾಲ್ಕನೇ ಅಲೆಯ ಆತಂಕವನ್ನು ಹೆಚ್ಚಿಸಿದೆ.

ನಾಲ್ಕನೇ ಅಲೆಯ ಸುಳಿವು ಸಿಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳಿಗೆ ಮುಂದಾಗಿದೆ.

ಎರಡು ಡೋಸ್ ಲಸಿಕಾಕರಣ ಪ್ರಕ್ರಿಯೆಯ ನಂತರ ಭಾರತದಲ್ಲಿ ಕೊರೋನಾ ತೀವ್ರತೆ ಕಡಿಮೆಯಾಗಿತ್ತು.ಪ್ರಸ್ತುತ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಲಸಿಕೀಕರಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ನಾಲ್ಕನೇ ಅಲೆ ತಡೆಯಲು ಸರ್ಕಾರ ತೀರ್ಮಾನಿಸಿದೆ.

ಮಾಸ್ಕ್ ಬಳಕೆ ಹಾಗೂ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವುದನ್ನು ಮರೆಯದಿರುವಂತೆ ಜನರಲ್ಲಿ ಮನವಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ದೇಶದ ಹಲವು ಕಡೆ ಸೋಂಕು ಪ್ರಕರಣ ಹೆಚ್ಚುತ್ತಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ತುರ್ತು ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ನಿರ್ಧಾರಗಳನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಒಪ್ಪಿಗೆ ಪಡೆದ ನಂತರ ತ್ವರಿತವಾಗಿ ಜಾರಿಗೊಳಿಸಬೇಕು. ಮುಂಬೈನಲ್ಲಿ ಮಾಸ್ಕ್ ಕಡ್ಡಾಯ ಕೈಬಿಡಲಾಗಿದೆ. ಆದರೆ ರಾಜ್ಯದಲ್ಲಿ ಅಂತಹ ನಿರ್ಧಾರ ಕೈಗೊಳ್ಳದಿದ್ದರೂ ಕೂಡ ರಾಜ್ಯದಲ್ಲಿ ಮಾಸ್ಕ್ ಬಳಕೆ ಕಡಿಮೆಯಾಗಿದೆ.

ಜೂನ್-ಜುಲೈ ತಿಂಗಳ ಹೊತ್ತಿಗೆ ನಾಲ್ಕನೇ ಅಲೆ ಪ್ರವೇಶದ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈಯಕ್ತಿಕ, ಇತರರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಮಾಸ್ಕ್ ಬಳಕೆ ಮುಂದುವರಿಸಬೇಕು ಎಂದು ಡಾ.ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....