ಕಾಂಗ್ರೆಸ್ ಸರ್ಕಾರ ಈ ಮೊದಲು ತೈಲ ಬಾಂಡ್ ಮೂಲಕ ಮಾಡಿದ್ದ ಸಾಲಗಳಿಗೆ ಬಿಜೆಪಿ ಸರ್ಕಾರ 93 ಸಾವಿರ ಕೋಟಿ ರೂ. ಮರುಪಾವತಿ ಮಾಡಿದೆ. 2026ರ ಒಳಗಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಪಾವತಿ ಮಾಡಲಾಗುತ್ತದೆ. ಈ ಹೆಚ್ಚಿನ ಮೊತ್ತವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತರಾಮನ್ ಅವರು ಟ್ವೀಟ್ ನಲ್ಲಿ ಮಾಹಿತಿ ತಿಳಿಸಿದ್ದಾರೆ.
ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡುತ್ತಿಲ್ಲ. ಇಂಧನ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಕಳೆದ 8 ವರ್ಷದಿಂದ ತೈಲಗಳ ತೆರಿಗೆಯಿಂದ ಕೇಂದ್ರ ಸರ್ಕಾರಕ್ಕೆ 100 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಆದಾಯ ಬಂದಿದೆ. ಈ ಹಣವನ್ನು ಸರ್ಕಾರ ಯಾವುದಕ್ಕೆ ವೆಚ್ಚ ಮಾಡಿದ ಎಂಬುದನ್ನು ತಿಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಆಗ್ರಹಿಸಿದ್ದಾರೆ. ಇದು ಕಾಂಗ್ರೆಸ್ ನ ವಾದವಾಗಿತ್ತು.