Wednesday, February 25, 2026
Wednesday, February 25, 2026

ಯುದ್ಧದಲ್ಲಿ ರಷ್ಯದಿಂದ ರಾಸಾಯನಿಕ ಅಸ್ತ್ರಬಳಕೆ ಸಂದೇಹದಲ್ಲಿ ಉಕ್ರೇನ್

Date:

ಉಕ್ರೇನ್‌ನಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸುವುದಕ್ಕೂ ಮೊದಲೇ ಪಶ್ಚಿಮದ ರಾಷ್ಟ್ರಗಳು ಮಾಸ್ಕೋ ಮೇಲೆ ಹೆಚ್ಚಿನ ನಿರ್ಬಂಧವನ್ನು ವಿಧಿಸಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕರೆ ನೀಡಿದ್ದಾರೆ.

ರಷ್ಯಾ ಮುತ್ತಿಗೆ ಹಾಕಿರುವ ದಕ್ಷಿಣ ಉಕ್ರೇನಿಯನ್ ಬಂದರಿನ ಮರಿಯುಪೋಲ್ ನಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆ ಎಂದು ಸೋಮವಾರ ವರದಿಯಾಗಿದೆ. ಆದರೆ ಈ ವರದಿಯ ಬಗ್ಗೆ ಯಾವುದೇ ದೃಢೀಕರಣವಿಲ್ಲ ಎಂದು ಗೊತ್ತಾಗಿದೆ. ಈ ಹಿನ್ನೆಲೆ “ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿರುವ ಝೆಲೆನ್ಸ್ಕಿ, ರಾಸಾಯನಿಕ ಅಸ್ತ್ರಗಳನ್ನು ಈಗಾಗಲೇ ಬಳಸಲಾಗಿದೆ ಎಂದು ಹೇಳಲಿಲ್ಲ.

ರಷ್ಯಾದ ಮೇಲೆ ಹೆಚ್ಚಿನ ನಿರ್ಬಂಧವನ್ನು ಹೇರುವುದರ ಮೂಲಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವುದಿರಲಿ ಅದರ ಬಗ್ಗೆ ಮಾತನಾಡುವುದಕ್ಕೂ ಕಡಿವಾಣ ಹಾಕುವುದಕ್ಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಷ್ಯಾದ ಸೇನಾ ಪಡೆಯು ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಬಹುದು ಎಂಬುದರ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಈ ಅಂಶವನ್ನು ನಾನು ವಿಶ್ವ ನಾಯಕರಿಗೆ ಮತ್ತೊಮ್ಮೆ ನೆನಪಿಸುವುದಕ್ಕೆ ಬಯಸುತ್ತೇನೆ. ಈ ಸಮಯದಲ್ಲಿ ಅದು ರಷ್ಯಾದ ಆಕ್ರಮಣಕ್ಕೆ ಹೆಚ್ಚು ಕಠಿಣ ಮತ್ತು ವೇಗವಾಗಿ ಪ್ರತಿಕ್ರಿಯಿಸಲು ಅಗತ್ಯವಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರು ಹೇಳಿದ್ದಾರೆ.

ಮರಿಯುಪೋಲ್‌ನಲ್ಲಿ ರಷ್ಯಾ ಸೇನೆಯು ರಾಸಾಯನಿಕ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿದೆ ಎಂಬುದಕ್ಕೆ ಯಾವುದೇ ದೃಢೀಕರಣವಿಲ್ಲ. ಈ ಕುರಿತು ಹೆಚ್ಚಿ ಮಾಹಿತಿ ಮತ್ತು ಸ್ಪಷ್ಟನೆಯನ್ನು ಮುಂದೆ ನೀಡಲಾಗುವುದು ಎಂದು ಮರಿಯುಪೋಲ್‌ನ ಮೇಯರ್ ಸಹಾಯಕ ಪೆಟ್ರೋ ಆಂಡ್ರ್ಯುಶ್ಚೆಂಕೊ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Basavanna ಬಸವಣ್ಣನವರ ಮತ್ತು ಕನಕದಾಸರ ರಚನೆಗಳಲ್ಲಿ ಸಂವಿಧಾನದ ಆಶಯಗಳು..

ಲೇ: ಡಾ.ರವಿ.ಎಂ.ಸಿದ್ಲಿಪುರ. Basavanna ಈ ಶೀರ್ಷಿಕೆಯಲ್ಲಿ 12, 16, 19-20, ಶತಮಾನಗಳಲ್ಲಿನ ಬಸವ,...

B. Y. Raghavendra ಊರಗಡೂರಿನ ಮೃತ ವಿದ್ಯಾರ್ಥಿ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ. ಕುಟುಂಬಸ್ಥರಿಗೆ ಸಾಂತ್ವನ.

B. Y. Raghavendra ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ...

Prof. K. Ramakrishnaiah ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ರಾಮಕೃಷ್ಣಯ್ಯ ನೇಮಕ.

Prof. K. Ramakrishnaiah ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ...

BMTC ಬೆಎಂಟಿಸಿ ಸಂಸ್ಥೆಯ ಮೃತ ನೌಕರರ ಅವಲಂಬಿತರಿಗೆ ಅನುಕಂಪಾಧಾರಿತ ನೇಮಕಾತಿ ಆದೇಶ,ಪರಿಹಾರ ವಿತರಣೆ.

BMTC ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ದಿನಾಂಕ 21 ಫೆಬ್ರವರಿ...