Wednesday, April 22, 2026
Wednesday, April 22, 2026

ಯುದ್ಧದಲ್ಲಿ ರಷ್ಯದಿಂದ ರಾಸಾಯನಿಕ ಅಸ್ತ್ರಬಳಕೆ ಸಂದೇಹದಲ್ಲಿ ಉಕ್ರೇನ್

Date:

ಉಕ್ರೇನ್‌ನಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸುವುದಕ್ಕೂ ಮೊದಲೇ ಪಶ್ಚಿಮದ ರಾಷ್ಟ್ರಗಳು ಮಾಸ್ಕೋ ಮೇಲೆ ಹೆಚ್ಚಿನ ನಿರ್ಬಂಧವನ್ನು ವಿಧಿಸಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕರೆ ನೀಡಿದ್ದಾರೆ.

ರಷ್ಯಾ ಮುತ್ತಿಗೆ ಹಾಕಿರುವ ದಕ್ಷಿಣ ಉಕ್ರೇನಿಯನ್ ಬಂದರಿನ ಮರಿಯುಪೋಲ್ ನಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆ ಎಂದು ಸೋಮವಾರ ವರದಿಯಾಗಿದೆ. ಆದರೆ ಈ ವರದಿಯ ಬಗ್ಗೆ ಯಾವುದೇ ದೃಢೀಕರಣವಿಲ್ಲ ಎಂದು ಗೊತ್ತಾಗಿದೆ. ಈ ಹಿನ್ನೆಲೆ “ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿರುವ ಝೆಲೆನ್ಸ್ಕಿ, ರಾಸಾಯನಿಕ ಅಸ್ತ್ರಗಳನ್ನು ಈಗಾಗಲೇ ಬಳಸಲಾಗಿದೆ ಎಂದು ಹೇಳಲಿಲ್ಲ.

ರಷ್ಯಾದ ಮೇಲೆ ಹೆಚ್ಚಿನ ನಿರ್ಬಂಧವನ್ನು ಹೇರುವುದರ ಮೂಲಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವುದಿರಲಿ ಅದರ ಬಗ್ಗೆ ಮಾತನಾಡುವುದಕ್ಕೂ ಕಡಿವಾಣ ಹಾಕುವುದಕ್ಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಷ್ಯಾದ ಸೇನಾ ಪಡೆಯು ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಬಹುದು ಎಂಬುದರ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಈ ಅಂಶವನ್ನು ನಾನು ವಿಶ್ವ ನಾಯಕರಿಗೆ ಮತ್ತೊಮ್ಮೆ ನೆನಪಿಸುವುದಕ್ಕೆ ಬಯಸುತ್ತೇನೆ. ಈ ಸಮಯದಲ್ಲಿ ಅದು ರಷ್ಯಾದ ಆಕ್ರಮಣಕ್ಕೆ ಹೆಚ್ಚು ಕಠಿಣ ಮತ್ತು ವೇಗವಾಗಿ ಪ್ರತಿಕ್ರಿಯಿಸಲು ಅಗತ್ಯವಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರು ಹೇಳಿದ್ದಾರೆ.

ಮರಿಯುಪೋಲ್‌ನಲ್ಲಿ ರಷ್ಯಾ ಸೇನೆಯು ರಾಸಾಯನಿಕ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿದೆ ಎಂಬುದಕ್ಕೆ ಯಾವುದೇ ದೃಢೀಕರಣವಿಲ್ಲ. ಈ ಕುರಿತು ಹೆಚ್ಚಿ ಮಾಹಿತಿ ಮತ್ತು ಸ್ಪಷ್ಟನೆಯನ್ನು ಮುಂದೆ ನೀಡಲಾಗುವುದು ಎಂದು ಮರಿಯುಪೋಲ್‌ನ ಮೇಯರ್ ಸಹಾಯಕ ಪೆಟ್ರೋ ಆಂಡ್ರ್ಯುಶ್ಚೆಂಕೊ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....