Sunday, December 14, 2025
Sunday, December 14, 2025

ರಷ್ಯಕ್ಕೆ ಭಾರತದಿಂದ ಅಗತ್ಯ ವಸ್ತುಗಳ ರಫ್ತು

Date:

ಉಕ್ರೇನ್‌ ಮೇಲೆ ಯುದ್ಧ ಸಾರಿರುವ ರಷ್ಯಾ ಮೇಲೆ ಅನೇಕ ಪಾಶ್ಚಿಮಾತ್ಯ ದೇಶಗಳು ವ್ಯಾಪಾರ ನಿರ್ಬಂಧ ಹೇರಿರುವ ಮಧ್ಯೆಯೇ, ರಷ್ಯಾಗೆ 200 ಕೋಟಿ ಡಾಲರ್‌ (15,218 ಕೋಟಿ ರು.) ಮೌಲ್ಯದ ಸರಕುಗಳನ್ನು ರಫ್ತು ಮಾಡಲು ಭಾರತ ಚಿಂತನೆ ನಡೆಸಿದೆ.

ದ್ವಿಪಕ್ಷೀಯ ವ್ಯಾಪಾರವನ್ನು ಮುಂದುವರಿಸಲು ಸ್ಥಳೀಯ ಕರೆನ್ಸಿಗಳಲ್ಲಿ ಪಾವತಿ ವ್ಯವಸ್ಥೆಗೆ ಭಾರತ ಮತ್ತು ರಷ್ಯಾ ಅವಕಾಶ ನೀಡಲು ಯೋಜನೆ ಸಿದ್ಧಪಡಿಸಿರುವುದರಿಂದ ಈ ಚಿಂತನೆ ನಡೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾ ಮೇಲೆ ಅನೇಕ ದೇಶಗಳು ನಿರ್ಬಂಧ ಹೇರಿರುವ ಕಾರಣ ಆ ದೇಶಕ್ಕೆ ಸಮಸ್ಯೆಯಾಗಿದೆ.ಹೀಗಾಗಿ ಭಾರತ ಈ ಕ್ರಮಕ್ಕೆ ಮುಂದಾಗಿದೆ.
ಔಷಧ ಉತ್ಪನ್ನಗಳು, ಪ್ಲಾಸ್ಟಿಕ್‌ಗಳು, ಸಾವಯವ ಮತ್ತು ರಾಸಾಯನಿಕಗಳು, ಗೃಹ ಉತ್ಪನ್ನಗಳು, ಅಕ್ಕಿ, ಟೀ ಮತ್ತು ಕಾಫಿಯಂತಹ ಪಾನೀಯಗಳು, ಹಾಲು ಉತ್ಪನ್ನಗಳು ಮತ್ತು ಗೋ ಉತ್ಪನ್ನಗಳು ಈ ಪಟ್ಟಿಯಲ್ಲಿವೆ.

ಈ ಸಂಬಂಧ ಭಾರತದ ವಿವಿಧ ಸ್ವದೇಶಿ ಉತ್ಪನ್ನಗಳಿಗೆ ಮಾರುಕಟ್ಟೆಪ್ರವೇಶವನ್ನು ಸಡಿಲಗೊಳಿಸುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಷ್ಯಾ ಜೊತೆ ಖಾಸಗಿಯಾಗಿ ಮಾತುಕತೆ ನಡೆಸಿದೆ. ರಷ್ಯಾದ ಸರಕುಗಳ ದೊಡ್ಡ ಆಮದುದಾರನಾಗಿರುವ ಭಾರತದ ಜತೆಗಿನ ವ್ಯಾಪಾರದಲ್ಲಿ ಸಮತೋಲನ ಸಾಧಿಸಲು ರುಪಾಯಿ ಹಾಗೂ ರೂಬೆಲ್ ಕರೆನ್ಸಿಗಳಲ್ಲಿ ವ್ಯಾಪಾರ ಚಟುವಟಿಕೆ ನಡೆಸಲು ಎರಡೂ ದೇಶಗಳು ಜತೆಗೂಡಿ ಕೆಲಸ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿವೆ.

ಅಮೆರಿಕ ಮತ್ತಿತರ ಪಾಶ್ಚಿಮಾತ್ಯ ದೇಶಗಳು ರಷ್ಯಾ ಮೇಲೆ ನಿರ್ಬಂಧ ವಿಧಿಸಿದ ಬಳಿಕ ವಿವಿಧ ದೇಶಗಳಿಂದ ರಷ್ಯಾಗೆ ಪೂರೈಕೆಯಾಗುತ್ತಿದ್ದ ಸರಕುಗಳಿಗೆ ತಡೆ ಬಿದ್ದಿದೆ. ಈ ಸರಕುಗಳನ್ನು ರಫ್ತು ಮಾಡಲು ಭಾರತ ಆಸಕ್ತಿ ತೋರಿಸಿದೆ.

ಅಂತಾರಾಷ್ಟ್ರೀಯ ಒತ್ತಡದ ನಡುವೆಯೂ ರಷ್ಯಾದಿಂದ ಭಾರೀ ರಿಯಾಯಿತಿ ದರದಲ್ಲಿ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಭಾರತವನ್ನು ಅನೇಕ ದೇಶಗಳು ಟೀಕಿಸಿವೆ.

ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ‘ರಷ್ಯಾದಿಂದ ಹೆಚ್ಚಿನ ತೈಲ ಖರೀದಿ ಭಾರತದ ಹಿತಾಸಕ್ತಿಗೆ ಒಳ್ಳೆಯದಲ್ಲ. ಭಾರತ ಹೆಚ್ಚಿನ ತೈಲ ಅಗತ್ಯವನ್ನು ಪೂರೈಸಲು ಅಮೆರಿಕ ಸಿದ್ಧ ಎಂದಿದ್ದಾರೆ.

ಸದ್ಯ ಭಾರತ ಅಮೆರಿಕಕ್ಕೆ 68 ಬಿಲಿಯನ್‌ ಡಾಲರ್‌ಗೂ ಹೆಚ್ಚಿನ ಮೊತ್ತದ ವಸ್ತುಗಳನ್ನು ರಫ್ತು ಮಾಡುತ್ತದೆ. ರಷ್ಯಾಗೆ 300 ಡಾಲರ್‌ ಮೌಲ್ಯದ ಸರಕುಗಳನ್ನು ಆಮದು ಮಾಡುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...