ಶಿವಮೊಗ್ಗದ ಪಿ.ಓ.ಶಿವಕುಮಾರ್ ಅವರನ್ನ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ನವದೆಹಲಿಯ ಕಾಂಗ್ರೆಸ್ ಪಕ್ಷದ ಕಛೇರಿಯಿಂದ ಈ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.ರಾಜ್ಯ ಪೋಲಿಸ್ ಇಲಾಖೆಯಲ್ಲಿ ಡಿವೈಎಸ್ ಪಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಶಿವಕುಮಾರ್ ಸದ್ಯ
ಸಹ್ಯಾದ್ರಿ ಸಂಯುಕ್ತ ನಿವೃತ್ತದಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೂ ಸಾಮಾಜಿಕ ,ರಾಜಕೀಯ ಚಿಂತನೆಗಳ ಮೂಲಕ
ಸಾರ್ವಜನಿಕ ಜೀವನದಲ್ಲಿ ಹೆಸರು ಮಾಡಿದ್ದಾರೆ.
ಪೋಲಿಸ್ ಇಲಾಖೆಗೆ ಪಿಎಸ್ಐ ಆಗಿ ನೇಮಕವಾಗಿ ಅನೇಕ ಅಪರಾಧಿಗಳ ಕೂಟಗಳ ಸೊಕ್ಕಡಗಿಸಿ ಬೇಡಿತೊಡಿಸಿದ ನಿಷ್ಠಾವಂತ ಅಧಿಕಾರಿ.
ತಮ್ಮ ಅಧಿಕಾರದ ಅವಧಿಯಲ್ಲಿ ನೊಂದವರಿಗೆ ಸಾಂತ್ವನ ನೀಡಿ,ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ನಿಷ್ಪಕ್ಷಪಾತವಾಗಿ ಹೋರಾಡಿದ್ದಾರೆ.
ಪ್ರಸ್ತುತ ರಾಷ್ಟ್ರೀಯ ಪಕ್ಷವೊಂದು ಶಿವಕುಮಾರ್ ಅವರಿಗೆ ರಾಜಕೀಯಕ್ಷೇತ್ರದಲ್ಲಿ ಸೇವೆಸಲ್ಲಿಸಲು ಆಮಂತ್ರಿಸಿರುವುದು
ಅವರ ಸೇವೆ ಮತ್ತು ಜನಪ್ರಿಯತೆಯನ್ನ ಗುರುತಿಸಿದಂತಾಗಿದೆ.