Tuesday, October 1, 2024
Tuesday, October 1, 2024

ಮಾನವೀಯ ಮೌಲ್ಯಗಳು ಮತ್ತು ನೈತಿಕ ಶಿಕ್ಷಣ ಎನ್ ಇ ಪಿ ಯಿಂದ ಸಾಧ್ಯ- ನಾಗೇಶ್

Date:

ಮಾನವೀಯತೆ ಮೌಲ್ಯಗಳುಳ್ಳ, ವಿನಯ ಹಾಗೂ ಗುಣಮಟ್ಟದ ನೈತಿಕ ಶಿಕ್ಷಣದಿಂದಾಗಿ ದೇಶ ಸಮೃದ್ದಿಯತ್ತ ಸಾಗುವಂತಾಗಲು ಹೊಸ ಶಿಕ್ಷಣ ನೀತಿ ಅವಶ್ಯವಾಗಿದೆ ಎಂದು ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರು ತಿಳಿಸಿದರು.

ಬಾಗಲಕೋಟೆಯ ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಸವೇಶ್ವರ ವಿದ್ಯಾವರ್ಧಕ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಕೊಡುಗೆ ನೀಡುವ ಭಾರತೀಯ ಮೌಲ್ಯಗಳಲ್ಲಿ ಬೇರೂರಿದ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ ಎಂದರು.

ಬುದ್ದಿ, ಕ್ರಿಯೆ ಮತ್ತು ಕಾರ್ಯಗಳಲ್ಲಿಯೂ ಸಹ ಭಾರತೀಯತೆಯ ಕುರಿತು ಹೆಮ್ಮೆಯನ್ನು ಆಳವಾಗಿ ಬೇರೂರುವಂತೆ ಮಾಡುವ ಜೊತೆಗೆ ಮಾನವ ಹಕ್ಕುಗಳ ಕುರಿತು ಜವಾಬ್ದಾರಿಯುವ ಬದ್ದತೆ, ಸುಸ್ಥಿರ ಅಭಿವೃದ್ದಿ ಮತ್ತು ಜೀವನ ಹಾಗೂ ಜಾಗತಿಕ ಕಲ್ಯಾಣವನ್ನು ಬೆಂಬಲಿಸಿ ವಾಸ್ತವದಲ್ಲಿ ಕಲಿಕಾರ್ಥಿಗಳನ್ನು ಜಾಗತಿಕ ನಾಗರಿಕರನ್ನಾಗಿಸುವ ದೃಷ್ಠಿಕೋನ ಹೊಂದಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಮೂಲಭೂತ ಕರ್ತವ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಆಳವಾದ ಗೌರವ, ದೇಶದೊಂದಿಗೆ ಭಾಂದವ್ಯ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ತಮ್ಮ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...