Wednesday, April 22, 2026
Wednesday, April 22, 2026

ಮಾನವೀಯ ಮೌಲ್ಯಗಳು ಮತ್ತು ನೈತಿಕ ಶಿಕ್ಷಣ ಎನ್ ಇ ಪಿ ಯಿಂದ ಸಾಧ್ಯ- ನಾಗೇಶ್

Date:

ಮಾನವೀಯತೆ ಮೌಲ್ಯಗಳುಳ್ಳ, ವಿನಯ ಹಾಗೂ ಗುಣಮಟ್ಟದ ನೈತಿಕ ಶಿಕ್ಷಣದಿಂದಾಗಿ ದೇಶ ಸಮೃದ್ದಿಯತ್ತ ಸಾಗುವಂತಾಗಲು ಹೊಸ ಶಿಕ್ಷಣ ನೀತಿ ಅವಶ್ಯವಾಗಿದೆ ಎಂದು ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರು ತಿಳಿಸಿದರು.

ಬಾಗಲಕೋಟೆಯ ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಸವೇಶ್ವರ ವಿದ್ಯಾವರ್ಧಕ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಕೊಡುಗೆ ನೀಡುವ ಭಾರತೀಯ ಮೌಲ್ಯಗಳಲ್ಲಿ ಬೇರೂರಿದ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ ಎಂದರು.

ಬುದ್ದಿ, ಕ್ರಿಯೆ ಮತ್ತು ಕಾರ್ಯಗಳಲ್ಲಿಯೂ ಸಹ ಭಾರತೀಯತೆಯ ಕುರಿತು ಹೆಮ್ಮೆಯನ್ನು ಆಳವಾಗಿ ಬೇರೂರುವಂತೆ ಮಾಡುವ ಜೊತೆಗೆ ಮಾನವ ಹಕ್ಕುಗಳ ಕುರಿತು ಜವಾಬ್ದಾರಿಯುವ ಬದ್ದತೆ, ಸುಸ್ಥಿರ ಅಭಿವೃದ್ದಿ ಮತ್ತು ಜೀವನ ಹಾಗೂ ಜಾಗತಿಕ ಕಲ್ಯಾಣವನ್ನು ಬೆಂಬಲಿಸಿ ವಾಸ್ತವದಲ್ಲಿ ಕಲಿಕಾರ್ಥಿಗಳನ್ನು ಜಾಗತಿಕ ನಾಗರಿಕರನ್ನಾಗಿಸುವ ದೃಷ್ಠಿಕೋನ ಹೊಂದಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಮೂಲಭೂತ ಕರ್ತವ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಆಳವಾದ ಗೌರವ, ದೇಶದೊಂದಿಗೆ ಭಾಂದವ್ಯ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ತಮ್ಮ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...