Monday, December 15, 2025
Monday, December 15, 2025

ಮಾನವೀಯ ಮೌಲ್ಯಗಳು ಮತ್ತು ನೈತಿಕ ಶಿಕ್ಷಣ ಎನ್ ಇ ಪಿ ಯಿಂದ ಸಾಧ್ಯ- ನಾಗೇಶ್

Date:

ಮಾನವೀಯತೆ ಮೌಲ್ಯಗಳುಳ್ಳ, ವಿನಯ ಹಾಗೂ ಗುಣಮಟ್ಟದ ನೈತಿಕ ಶಿಕ್ಷಣದಿಂದಾಗಿ ದೇಶ ಸಮೃದ್ದಿಯತ್ತ ಸಾಗುವಂತಾಗಲು ಹೊಸ ಶಿಕ್ಷಣ ನೀತಿ ಅವಶ್ಯವಾಗಿದೆ ಎಂದು ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರು ತಿಳಿಸಿದರು.

ಬಾಗಲಕೋಟೆಯ ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಸವೇಶ್ವರ ವಿದ್ಯಾವರ್ಧಕ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಕೊಡುಗೆ ನೀಡುವ ಭಾರತೀಯ ಮೌಲ್ಯಗಳಲ್ಲಿ ಬೇರೂರಿದ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ ಎಂದರು.

ಬುದ್ದಿ, ಕ್ರಿಯೆ ಮತ್ತು ಕಾರ್ಯಗಳಲ್ಲಿಯೂ ಸಹ ಭಾರತೀಯತೆಯ ಕುರಿತು ಹೆಮ್ಮೆಯನ್ನು ಆಳವಾಗಿ ಬೇರೂರುವಂತೆ ಮಾಡುವ ಜೊತೆಗೆ ಮಾನವ ಹಕ್ಕುಗಳ ಕುರಿತು ಜವಾಬ್ದಾರಿಯುವ ಬದ್ದತೆ, ಸುಸ್ಥಿರ ಅಭಿವೃದ್ದಿ ಮತ್ತು ಜೀವನ ಹಾಗೂ ಜಾಗತಿಕ ಕಲ್ಯಾಣವನ್ನು ಬೆಂಬಲಿಸಿ ವಾಸ್ತವದಲ್ಲಿ ಕಲಿಕಾರ್ಥಿಗಳನ್ನು ಜಾಗತಿಕ ನಾಗರಿಕರನ್ನಾಗಿಸುವ ದೃಷ್ಠಿಕೋನ ಹೊಂದಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಮೂಲಭೂತ ಕರ್ತವ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಆಳವಾದ ಗೌರವ, ದೇಶದೊಂದಿಗೆ ಭಾಂದವ್ಯ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ತಮ್ಮ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...

JCI Shimoga ಜೀವನ ಮೌಲ್ಯಗಳನ್ನ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು- ಮಲ್ಲಿಕಾರ್ಜುನ ಕಾನೂರ್

JCI Shimoga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ...

Chamber of Commerce Shivamogga ಡಿಸೆಂಬರ್ 16. ಧ್ಯಾನದಿಂದ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ಕಾರ್ಯಾಗಾರ

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...