Friday, April 10, 2026
Friday, April 10, 2026

ರಾಜ್ಯದಲ್ಲಿ ಈಗಿನಿಂದಲೇ ಕೋವಿಡ್ ವಿರುದ್ಧ ಮುಂಜಾಗ್ರತೆ- ಸುಧಾಕರ್

Date:

ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಇನ್ನು 8 ದೇಶಗಳಲ್ಲಿ ಕೊರೋನಾ ಹರಡುವಿಕೆ ತೀವ್ರವಾಗಿದೆ. ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಕಂಡುಬಂದಿದೆ. ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್, ಚೀನಾ ದೇಶಗಳಲ್ಲಿ ಸಾಂಕ್ರಾಮಿಕದ ತೀವ್ರತೆ ಹೆಚ್ಚಿದೆ. ಜರ್ಮನಿ, ಯುಕೆಯಲ್ಲೂ ಸೋಂಕು ಹೆಚ್ಚಾಗಿದೆ. ಇಲ್ಲಿ ಎಕ್ಸ್‌ಇ ಮತ್ತು ಎಂಇ ಎಂಬ ಹೊಸ ವೈರಾಣು ಪ್ರಭೇದಗಳು ಕಂಡುಬಂದಿವೆ. ದೇಶದಲ್ಲಿ ನವದೆಹಲಿ ಹಾಗೂ ಹರಿಯಾಣ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದೆ. ಇದಕ್ಕಾಗಿ ತುರ್ತು ಸಮಾಲೋಚನೆ ಸಭೆ ನಡೆಸಲಾಗಿದೆ. ಈ 8 ದೇಶಗಳಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಬರುವವರ ಮೇಲೆ ವಿಶೇಷ ನಿಗಾವಹಿಸಬೇಕಿದೆ. ಆ ಪ್ರಯಾಣಿಕರಿಗೆ ಥರ್ಮಲ್ ತಪಾಸಣೆ ಮಾಡುತ್ತದೆ. ಅವರು ಮನೆಗೆ ತೆರಳಿದ ನಂತರ ಒಂದು ವಾರ ಅಥವಾ ಹತ್ತು ದಿನ ಟೆಲಿ ಮಾನಿಟರಿಂಗ್ ಮಾಡುತ್ತದೆ. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಇರಿಸುವುದು, ಸುಮಾರು 5 ಸಾವಿರ ಮಕ್ಕಳಿಗೆ ಪರೀಕ್ಷೆ ಮಾಡುವುದು ಮೊದಲಾದ ಸಲಹೆಗಳನ್ನು ತಜ್ಞರು ನೀಡಿದ್ದಾರೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಗುರುಪುರ ಬಿಜಿಎಸ್ ಸ್ವತಂತ್ರ ಪಪೂ. ಕಾಲೇಜಿಗೆ ಶೇ.100 ಫಲಿತಾಂಶ ಸಾಧನೆ.

2nd PUC Exam Result 2026 ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ...

DVS Independent College ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ.ಡಿವಿಎಸ್ ಪದವಿ ಪೂರ್ವ ಕಾಲೇಜಿನ ಗಮನಾರ್ಹ ಸಾಧನೆ.

DVS Independent College ದ್ವಿತೀಯ ಪಿಯು ಪರೀಕ್ಷೆಯಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್...