Friday, August 14, 2026
Friday, August 14, 2026

ಪಾಕಿಸ್ತಾನವು ಭಾರತದೊಂದಿಗೆ ಶಾಂತಿ- ಸಹಕಾರ ಬಯಸುತ್ತದೆ- ಶಹಬಾಜ್

Date:

ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ್ದ ಮೊದಲ ದಿನವೇ ಕಾಶ್ಮೀರದ ಬೀದಿಗಳಲ್ಲಿ ರಕ್ತ ಹರಿಯುತ್ತಿದೆ ಎನ್ನುವ ಮೂಲಕ ಭಾರತವನ್ನು ಕೆಣಕಿದ್ದ ಶೆಹಬಾಜ್‌ ಷರೀಫ್ ನಿನ್ನೆ ಮೆತ್ತಗಾಗಿದ್ದಾರೆ.

ತಮಗೆ ಅಭಿನಂದನೆ ಸಲ್ಲಿಸಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಟ್ವೀಟ್‌ಗೆ ನಿನ್ನೆ. ಪ್ರತಿಕ್ರಿಯೆ ನೀಡಿರುವ ಶೆಹಬಾಜ್‌, ನಮ್ಮ ದೇಶವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಯುತ ಸಂಬಂಧವನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಎರಡೂ ದೇಶಗಳ ನಡುವೆ ಇರುವ ಎಲ್ಲ ಸಮಸ್ಯೆಗಳಿಗೂ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕಿದೆ. ಪಾಕಿಸ್ತಾನವೂ ಅದನ್ನೇ ಬಯಸುತ್ತದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನವು ಮಾಡುತ್ತಿರುವ ತ್ಯಾಗವು ಎಲ್ಲರಿಗೂ ಗೊತ್ತಿದೆ. ನಾವೀಗ ಶಾಂತಿ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯತ್ತ ಗಮನ ನೆಡಬೇಕಿದೆ ಎಂದು ಶೆಹಬಾಜ್‌ ಹೇಳಿದ್ದಾರೆ.

ಶೆಹಬಾಜ್‌ರಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದ ಪ್ರಧಾನಿ ಮೋದಿ, ಉಗ್ರವಾದ- ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಭಾರತ ಬಯಸುತ್ತದೆ ಎಂದಿದ್ದರು. ಇನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿ, ಅಭಿನಂದನೆಯ ಜೊತೆಗೆ ಭಯೋತ್ಪಾದನೆ ಮಟ್ಟ ಹಾಕಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...