Tuesday, December 9, 2025
Tuesday, December 9, 2025

ಅಡಿಕೆ ಮೇಲಿನ ಜಿಎಸ್ ಟಿ ದರ ಇಳಿಸಲು ಮನವಿ

Date:

ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್‌ಟಿ ದರವನ್ನು ಶೇ.5ರಿಂದ ಶೇ 2ಕ್ಕೆ ಇಳಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ಕುಮಾರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಅವರು, ಸಹಕಾರ ಸಂಸ್ಥೆಗಳು ಶೇ. 100ರಷ್ಟು ತೆರಿಗೆಯನ್ನು ಪಾವತಿಸುತ್ತವೆ.

ಇಡೀ ಅಡಿಕೆ ಮಾರುಕಟ್ಟೆಯಲ್ಲಿ ನಮ್ಮ ಪಾಲು ಶೇ.15ರಷ್ಟು ಇರುವುದರಿಂದ ಸಹಕಾರಿ ಸಂಘಗಳು ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಜಿಎಸ್‌ಟಿ ಇಳಿಕೆ ಮಾಡಬೇಕು ಎಂದು ವಿನಂತಿಸಿದ್ದಾರೆ.

ಬಾಕಿ ಇರುವ ಕೆಲಸಕ್ಕೆ ಆರ್ಥಿಕ ನೆರವಿನ ಅಗತ್ಯ ಇದೆ. 5 ಕೋಟಿ ರೂಪಾಯಿ ಮಂಜೂರು ಮಾಡಬೇಕು. ಅಡಿಕೆ ಹಳದಿ ರೋಗದಿಂದ ತೋಟ ನಾಶವಾಗಿರುವ ಸುಳ್ಯ, ಕೊಪ್ಪ ಮಡಿಕೇರಿ ಭಾಗದ ಬೆಳೆಗಾರರು ಸಹಕಾರಿ ಸಂಘಗಳಿಂದ ಪಡೆದ ಸಾಲ ಮನ್ನಾ ಮಾಡಿ, ಹೊಸ ಕೃಷಿ ಮಾಡಲು ಆರ್ಥಿಕ ಸಹಾಯ ನೀಡಬೇಕು. ಅಡಿಕೆ ಕೃಷಿಯಲ್ಲಿ ಕಾರ್ಮಿಕರ ಕೊರತೆಯಿದೆ.ಹೊಸತಾಗಿ ಮಾರುಕಟ್ಟೆಗೆ ಬಂದಿರುವ ಕಾರ್ಬನ್ ಫೈಬರ್ ದೋಟಿಯ ಕಸ್ಟಮ್ಸ್‌ ಸುಂಕವನ್ನು ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮನವಿಪತ್ರದಲ್ಲಿ ವಿನಂತಿಸಲಾಗಿದೆ.

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಂ. ಕೃಷ್ಣಕುಮಾರ್, ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಇನ್ನೂ ಮುಂತಾದ ವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...