Thursday, June 11, 2026
Thursday, June 11, 2026

ವಿಶ್ವ ರತ್ನ ಡಾ.ಅಂಬೇಡ್ಕರ್

Date:

ಇಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ 130 ನೇ ಜಯಂತಿ.

ಭಾರತ ಮಾತ್ರವಲ್ಲದೇ ಸುಮಾರು 143ಕ್ಕಿಂತ ಹೆಚ್ಚು ರಾಷ್ಟ್ರಗಳು ಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು ಆಚರಿಸುತ್ತಿವೆ. ಇದು ಹೆಮ್ಮೆಯ ವಿಷಯವೇ ಸರಿ.

ಅಂಬೇಡ್ಕರ್ ರವರ ಸಾಧನೆಗೆ ಇಡೀ ಜಗತ್ತೇ ತಲೆ ಬಾಗಿದೆ ಎಂದರೆ ತಪ್ಪಾಗಲಾರದು.

ಡಾ. ಬಿ.ಆರ್. ಅಂಬೇಡ್ಕರ್ 1891ರ ಏಪ್ರಿಲ್ 14 ರಂದು ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು.
ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು.

ಭೀಮರಾವ್ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.
ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಅಸ್ಪೃಶ್ಯ ಕುಟುಂಬದವರು.
ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು.

ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರಂತೆ.

ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಅವರು ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ದೇಶದ ಸಂವಿಧಾನಕ್ಕೆ ನೀಡಿರುವ ಕೊಡುಗೆ ಅಪಾರ.

ಸಮಾಜ, ಜಾತಿ ಮತ್ತು ಸಮುದಾಯಗಳ ಬಗೆಗಿನ ಅವರ ಆಲೋಚನೆಗಳು ರಾಜಕೀಯ ಗಡಿಗಳನ್ನು ಮೀರಿದ್ದಾಗಿದೆ.

ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ದೀನ ದಲಿತರಿಗಾಗಿ ಹೋರಾಡಿದರು ಮತ್ತು ಲಿಂಗ ಸಮಾನತೆಯನ್ನು ಬಲವಾಗಿ ನಂಬಿದ್ದರು. ಅವರು ಶಿಕ್ಷಣದ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿದರು. ಸಮಾಜದ ಎಲ್ಲ ಜನರಿಗೆ ಸಮಾನತೆಯನ್ನು ಖಾತ್ರಿಪಡಿಸಿಕೊಳ್ಳಲು ಜಾತಿ ಅಡೆತಡೆಗಳನ್ನು ಕೆಡವಲು ಶ್ರಮಿಸಿದರು.

ದೀನ ದಲಿತರಿಗೆ ಶಿಕ್ಷಣವನ್ನು ತಲುಪುವಂತೆ ಮಾಡಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವರು ಒತ್ತು ನೀಡಿದರು.

ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಹಲವಾರು ಸುಧಾರಣೆಗಳನ್ನು ತಂದರು. ದಲಿತರು ಹಾಗೂ ಅಸ್ಪೃಶ್ಯರಿಗೆ ಸಮಾನ ಹಕ್ಕುಗಳಿಗಾಗಿ ಒತ್ತಾಯಿಸಿ ಪ್ರತಿಭಟನೆಗಳನ್ನು ಸಹ ನಡೆಸಿದರು. ಮಹಾನ್ ವ್ಯಕ್ತಿ ಅಂಬೇಡ್ಕರ್ ವರ್ಗ ಮತ್ತು ಜಾತಿಯನ್ನು ಲೆಕ್ಕಿಸದೆ ತುಳಿತಕ್ಕೊಳಗಾದವರ ಮತ್ತು ಬಡವರ ಹಕ್ಕುಗಳಿಗಾಗಿ ಹೋರಾಡಿದರು.

ಹಿಂದೂ ಧರ್ಮದಲ್ಲಿ ಇದ್ದು ಅಸ್ಪೃಶ್ಯತೆ ಹೋಗಲಾಡಿಸುವುದು ಕಷ್ಟವೆಂದು ಅರಿತ ಅಂಬೇಡ್ಕರ್ 1956 ರಲ್ಲಿ ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 200,000 ಸಹವರ್ತಿ ದಲಿತರೊಂದಿಗೆ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.

ಕರಡು ಸಮಿತಿಯ ಅದ್ಯಕ್ಷರಾಗಿದ್ದ ಅಂಬೇಡ್ಕರ ಅವರು ಸಹಜವಾಗಿ ‘ಸಂವಿಧಾನ ಶಿಲ್ಪಿ’ ಎನಿಸಿದರು.
ಅಂಬೇಡ್ಕರ್ ಅವರಿಗೆ ಭಾರತದ ಪರಮೋಚ್ಛ ನಾಗರಿಕ ಪುರಸ್ಕಾರ “ಭಾರತ ರತ್ನ” ವನ್ನು ಮರಣೋತ್ತರವಾಗಿ ಪ್ರಧಾನ ಮಾಡಲಾಯಿತು.

ಸಂಸತ್ತು (ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ) ಸದಸ್ಯರಾಗಿ
ಅಂಬೇಡ್ಕರರನ್ನು ಆಗಿನ ಪ್ರಧಾನಿ ಜವಹರಲಾಲ್ ನೆಹರೂ ತಮ್ಮ ಮಂತ್ರಿಮಂಡಲದಲ್ಲಿ ಕಾನೂನು ಸಚಿವರಾಗುವಂತೆ ಆಹ್ವಾನಿಸಿದರು.

1952 ಜೂನ್ 15ರಂದು ಕೊಲಂಬಿಯಾ ವಿಶ್ವವಿದ್ಯಾನಿಲಯವು ಅವರಿಗೆ ಕಾನೂನಿನ ಡಾಕ್ಟರೇಟ್(ಎಲ್‌ಎಲ್‍.ಡಿ) ಗೌರವ ಪದವಿ ಪ್ರದಾನ ಮಾಡಿತು.

1953, ಜನವರಿ 12ರಂದು ಉಸ್ಮಾನಿಯಾ ವಿಶ್ವವಿದ್ಯಾನಿಲಯವು ಅವರಿಗೆ ಎಲ್‌ಎಲ್‍.ಡಿ ಗೌರವ ಪದವಿ ಕೊಟ್ಟು ಪುರಸ್ಕರಿಸಿತು.

2015- ವಿಶ್ವರತ್ನ ಪ್ರಶಸ್ತಿಯನ್ನು ಕೊಲಂಬಿಯ ವಿಶ್ವವಿದ್ಯಾನಿಲಯದಿಂದ ಮರಣೋತ್ತರವಾಗಿ ನೀಡಲಾಯಿತು.

ಮಾರ್ಚ್ 31, 1990 ರಂದು ಅವರಿಗೆ ಮರಣೋತ್ತರೂವಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ನೀಡಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಡಿಸೆಂಬರ್ 6 ,1956ರಂದು ಇಹಲೋಕ ತ್ಯಜಿಸಿದರು.

ಇಂದು ಆ ಮಹಾನ್ ಉದಾತ್ತ ಆತ್ಮವನ್ನು ನೆನಪಿಸಿಕೊಳ್ಳುವ ಮತ್ತು ಅವರ ನಂಬಿಕೆಗಳು, ಬೋಧನೆಗಳು, ಕಾರ್ಯಗಳನ್ನು ಗೌರವಿಸುವ ಸುದಿನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ...

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ...

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ...