Thursday, June 12, 2025
Thursday, June 12, 2025

ಶಿವಮೊಗ್ಗ ಜಿಲ್ಲೆಯಲ್ಲಿ‌ ದ್ವಿತೀಯ ಪಿ,ಯು, ಪರೀಕ್ಷೆ ನಡೆಸಲು ಸಿದ್ದತೆ

Date:

ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 22ರಿಂದ ರಿಂದ ಮೇ 18ರವೆರೆಗೆ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿಯೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಪರೀಕ್ಷೆಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಒಟ್ಟು 36ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಡೆಯುವ ಪರೀಕ್ಷೆಯ ಎಲ್ಲಾ ಹಂತಗಳನ್ನು ಸಿಸಿ.ಟಿವಿ. ಕಣ್ಗಾವಲಿನಲ್ಲಿ ಸೆರೆಹಿಡಿಯಲಾಗುವುದು ಎಂದವರು ನುಡಿದರು.

ಜಿಲ್ಲೆಯ 36 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, 17,446 ಹೊಸ ವಿದ್ಯಾರ್ಥಿಗಳು, 924 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 663 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 19.033ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಈ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿ, ಉಸ್ತುವಾರಿ ನೋಡಿಕೊಳ್ಳಲು, ಪರೀಕ್ಷೆಗಳು ಸುಗಮವಾಗಿ ನಡೆಯಲು 11 ಮಾರ್ಗಗಳಿಗೆ ತ್ರಿಸದಸ್ಯ ಸಮಿತಿಯ 33ಜನ ಸದಸ್ಯರುಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್ ಸಹಕಾರವನ್ನು ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ, ಸಾಗರ ತಾಲೂಕಿನ ಸಿರಿವಂತೆ ಮತ್ತು ಹೊಳಲೂರಿನಲ್ಲಿ ಹೊಸದಾಗಿ ಮೂರು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪುಗೂಡುವುದನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂಧಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಸಿಬ್ಬಂಧಿಗಳೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ನಿಯೋಜಿತ ಅಧಿಕಾರಿಗಳು ಸದಾ ಜಾಗೃತವಾಗಿದ್ದು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯಗಳನ್ನು ಒದಗಿಸುವಂತೆ ಹಾಗೂ ಕೊಠಡಿಯೊಳಗೆ ವಿದ್ಯುತ್ ಸೌಲಭ್ಯ ಮತ್ತು ಫ್ಯಾನ್‍ಗಳಿರುವಂತೆ ನೋಡಿಕೊಳ್ಳಲು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು.

ಇರುವ ಸಿಸಿ ಟಿವಿ. ಕ್ಯಾಮರಾಗಳು ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳಲು ಸೂಚಿಸಿದರು.
ಪರೀಕ್ಷಾರ್ಥಿಗಳು ಹಾಗೂ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳೂ ಸಹ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣ, ಸ್ಮಾರ್ಟ್‍ವಾಚ್‍ಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ||ನಾಗೇಂದ್ರ ಎಫ್.ಹೊನ್ನಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ ಕಾಗಲ್ಕರ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...