Monday, August 10, 2026
Monday, August 10, 2026

ವಿಶ್ವದಲ್ಲಿ ಪ್ರಜಾಪ್ರಭುತ್ವ ಉಳಿಯಲು ಅಂಬೇಡ್ಕರ್ ಕಾರಣ-ಈಶ್ವರಪ್ಪ

Date:

ಡಾ.ಬಿ.ಆರ್. ಅಂಬೇಡ್ಕರ್ ರವರ 131ನೇ ಜನ್ಮದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಯಿತು.

ನಗರದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಅವರ ಭಾವಚಿತ್ರವನ್ನು ರಥದಲ್ಲಿ ಇರಿಸಿ ಮಹಾನಗರ ಪಾಲಿಕೆ ಆವರಣದಿಂದ ಬಿ. ಹೆಚ್. ರಸ್ತೆ, ಶಿವಪ್ಪ ನಾಯಕ ವೃತ್ತ, ನೆಹರು ರಸ್ತೆ, ಮಾರ್ಗವಾಗಿ ಕುವೆಂಪು ರಂಗಮಂದಿರಕ್ಕೆ ತರಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ಇಡೀ ರಾಜ್ಯದಲ್ಲಿ, ಸಮಾಜದಲ್ಲಿ ಅಳವಡಿಸಲು ಜೀವನಪರ್ಯಂತ ಪ್ರಯತ್ನ ಪಡುತ್ತೇನೆ. ಇವತ್ತು ಇಡೀ ವಿಶ್ವದಲ್ಲಿ ಪ್ರಜಾಪ್ರಭುತ್ವ ಉಳಿಯಲು ಅಂಬೇಡ್ಕರ್ ಅವರೇ ಕಾರಣ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಯಾವ ಯಾವ ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಆ ದೇಶದಲ್ಲೆಲ್ಲಾ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾಡಿದಂತಹ ಕರಡು ಸಮಿತಿಯ ರಚನೆಯೇ ಕಾರಣ ಎಂದರು.

ಒಬ್ಬೊಬ್ಬರಿಗೆ ಒಂದೊಂದು ವಿಶೇಷ. ಹಿಂದುಗಳಿಗೆ ಭಗವದ್ಗೀತೆ, ಮುಸಲ್ಮಾನರಿಗೆ ಕುರಾನ್, ಕ್ರಿಶ್ಚಿಯನ್ ರಿಗೆ ಬೈಬಲ್. ಎಲ್ಲರಿಗೂ ಪವಿತ್ರ ಗ್ರಂಥವೆಂದರೆ ಅಂಬೇಡ್ಕರ್ ಅವರ ಸಂವಿಧಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲರೂ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆ.ಬಿ. ಅಶೋಕ್ ಕುಮಾರ್ ಅವರು ಅಂಬೇಡ್ಕರ್ ಅವರ ಜೀವನದ ಬಗ್ಗೆ ಮಾತನಾಡಿದರು.

ಶಿವಮೊಗ್ಗದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಶಿವಲಿಂಗ ಮೂರ್ತಿಯವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ.ಎಸ್. ಅರುಣ್, ಶ್ರೀ ಎನ್. ಜಿ . ನಾಗರಾಜ್, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಶ್ರೀಮತಿ ಎಂ.ಎಲ್ .ವೈಶಾಲಿ, ಡಾ.ಬಿ.ಎಂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಶ್ರೀ ಉಮೇಶ್ ಹೆಚ್, ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ. ಅಶೋಕ್ ನಾಯಕ್. ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...