Monday, March 24, 2025
Monday, March 24, 2025

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಚಿವ ಪ್ರಹ್ಲಾದ ಜೋಶಿ ವಿವರಣೆ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಚಿವ ಸ್ಥಾನ ಖಾಲಿ ಇದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇದ್ದು, ಸಂತೋಷ್ ಆತ್ಮಹತ್ಯೆ ಕೇಸ್ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದು, ಐದು ಸ್ಥಾನ ಖಾಲಿಯಾದಂತಾಗುತ್ತದೆ. ಇನ್ನು ಸಿಎಂ ಇನ್ನು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆದು ಹೊಸದಾಗಿ 6-7 ಮಂದಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...