Monday, December 15, 2025
Monday, December 15, 2025

ರಣಬೀರ್- ಅಲಿಯ ಭಟ್ ಶುಭ ವಿವಾಹ

Date:

ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ನವ ದಂಪತಿಗೆ ಬಾಲಿವುಡ್‌ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ.

ಇನ್‌ಸ್ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ರಣಬೀರ್ ಮತ್ತು ಆಲಿಯಾ ಫೋಟೊ ಹಂಚಿಕೊಂಡಿರುವ ಪ್ರಿಯಾಂಕಾ, ನಿಮ್ಮಿಬ್ಬರಿಗೂ ಅಭಿನಂದನೆಗಳು… ಸದಾ ಪ್ರೀತಿ, ಸಂತೋಷ ನಿಮ್ಮದಾಗಲಿ ಎಂದು ಬರೆದುಕೊಂಡಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಅವರಿಗೆ ‘ಜೀವಮಾನದ ಪ್ರೀತಿ ಮತ್ತು ಸಂತೋಷ’ ಎಂದು ಪ್ರಿಯಾಂಕಾ ಚೋಪ್ರಾ ಶುಭ ಹಾರೈಸಿದ್ದಾರೆ.

ಬಾಂದ್ರಾದಲ್ಲಿರುವ ರಣಬೀರ್‌ ಅವರ ‘ವಾಸ್ತು’ ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಸಮಾರಂಭ ನೆರವೇರಿದೆ.

ಸಂಭ್ರಮದಲ್ಲಿ ಫೋಟೊಗಳನ್ನು ಆಲಿಯಾ ಮತ್ತು ರಣಬೀರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬಗಳ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿದ್ದರು.

ನೀತು ಕಪೂರ್, ಕರೀನಾ ಕಪೂರ್, ಮಹೇಶ್ ಭಟ್, ಸೋನಿ ರಜ್ದಾನ್, ಕರಿಷ್ಮಾ ಕಪೂರ್, ಕರಣ್ ಜೋಹರ್, ಅಯಾನ್ ಮುಖರ್ಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

2010ರಲ್ಲಿ ‘ಅಂಜಾನ ಅಂಜಾನಿ’ ಹಾಗೂ 2012 ರಲ್ಲಿ ‘ಬರ್ಫಿ’ ಸಿನಿಮಾದಲ್ಲಿ ರಣಬೀರ್‌ಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...