Wednesday, December 17, 2025
Wednesday, December 17, 2025

ಡಾ.ಅಂಬೇಡ್ಕರ್ ಓರ್ವ ವಿಶ್ವಮಾನವ -ಅಶ್ವತ್ಥನಾರಾಯಣ

Date:

ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಧೀಮಂತರಾಗಿದ್ದರು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸಾಗರ ತಾಲ್ಲೂಕು ಬಿಜೆಪಿ ಘಟಕ ಗುರುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಿತ ವರ್ಗದಲ್ಲಿ ಹುಟ್ಟಿದ ಅಂಬೇಡ್ಕರ್ ಅವರು ಪರಿಶ್ರಮದಿಂದ ಜ್ಞಾನಾರ್ಜನೆ ಮಾಡಿ ತಮ್ಮ ಪ್ರತಿಭೆಗೆ ಸಾಣೆ ಹಿಡಿದುಕೊಂಡಿದ್ದರು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅವರು ಶಿಕ್ಷಣ ತಜ್ಞರಾಗಿ, ವಕೀಲರಾಗಿ, ಆರ್ಥಿಕ ತಜ್ಞರಾಗಿ, ಪತ್ರಕರ್ತರಾಗಿ, ಸಮಾಜ ಸೇವಕರಾಗಿ, ಎಲ್ಲಾ ಧರ್ಮಗಳ ಬಗ್ಗೆ ತಿಳಿವಳಿಕೆ ಹೊಂದಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರು. ನಮಗೆ ಸಂವಿಧಾನವನ್ನ ಕೊಟ್ಟ ಅವರು. ವಿಶ್ವಮಾನವರಾಗಿದ್ದರು ಎಂದು ವಿವರಿಸಿದರು.

ಅಂಬೇಡ್ಕರ್ ಅವರು ಶಿಕ್ಷಣದ ಬಲದಿಂದ ಹಾಗೂ ತಮಗಿದ್ದ ಸಮಾಜಪರ ಕಾಳಜಿಯಿಂದಾಗಿ ಇಡೀ ವಿಶ್ವಕ್ಕೆ ಪ್ರಸ್ತುತವಾದ ವ್ಯಕ್ತಿಯಾಗಿದ್ದರು. ಸದೃಢ ಸಮಾಜ ಕಟ್ಟುವ ನಿಟ್ಟಿನಲ್ಲಿ ನಾವು ನಮ್ಮ ನಮ್ಮ ನಡುವಿನ ಪೈಪೋಟಿಯನ್ನು ಬಿಟ್ಟು ಇಡೀ ಜಗತ್ತಿನೊಂದಿಗೆ ಸ್ಪರ್ಧೆ ಮಾಡಬೇಕು. ಉದ್ಯೋಗದಲ್ಲಿ, ಕೌಶಲದಲ್ಲಿ, ಶಿಕ್ಷಣದಲ್ಲಿ, ಉದ್ಯಮಶೀಲತೆಯಲ್ಲಿ ನಾವು ಸಾಧನೆ ಮಾಡಲು ಈಗ ಬೆಂಗಳೂರಿನಂತಹ ನಗರಕ್ಕೋ ಅಥವಾ ಅಮೆರಿಕದಂತಹ ದೇಶಕ್ಕೋ ಹೋಗಲೇಬೇಕು ಎಂದೇನೂ ಇಲ್ಲ. ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಇಲ್ಲಿದ್ದುಕೊಂಡೇ ಜಗತ್ತಿನ ಗಮನ ಸೆಳೆಯುವಂತಹ ಸಾಧನೆ ಮಾಡಿ ಅಭಿವೃದ್ಧಿ ಹೊಂದಬಹುದು ಎಂದು ಅಶ್ವತ್ಥನಾರಾಯಣ ನುಡಿದರು.

ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...