Tuesday, August 25, 2026
Tuesday, August 25, 2026

ಫೋನ್ ಕರೆ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಬಹುದು- ಅಶೋಕ್

Date:

ರಾಜ್ಯ ಸರ್ಕಾರವು ಪಿಂಚಣಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಇನ್ಮುಂದೆ 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್.
ಅಶೋಕ್ ಅವರು ಮಾಹಿತಿ ನೀಡಿದ್ದಾರೆ.

ಇಂಥ ಯೋಜನೆ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತರಲಾಗಿದೆ.
ಯೋಜನೆಗೆ ಸಂಬಂಧಿಸಿದಂತೆ ನಾಳ್ಕು ಡಿಜಿಟಲ್ ಗಳ ಟೋಲ್ ಫ್ರೀ ನಂಬರ್ ನೀಡಲಾಗುತ್ತದೆ. ಆ ನಂಬರ್ ಗೆ ಕರೆ ಮಾಡಿ ಪಿಂಚಣಿ ಫಲಾನುಭವಿಗಳಾಗುವವರ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ಸಂಖ್ಯೆ ನೀಡಬೇಕು. 15 ನಿಮಿಷಗಳಲ್ಲಿ ಆ ಮಾಹಿತಿ ಸಂಬಂಧಪಟ್ಟ ಜಿಲ್ಲಾಧಿಕಾರಿ, ತಹಸೀಲ್ದಾರ್ ಮತ್ತಿತರ ಅಧಿಕಾರಿಗೆ ಹೋಗುತ್ತದೆ. ಗ್ರಾಮ ಸಹಾಯಕರು ಅವರ ಮನೆಗೆ ತೆರಳಿ ಫಲಾನುಭವಿಯ ಫೋಟೋ, ಇತರೆ ದಾಖಲೆ ಪಡೆದು ಅಪ್ ಲೋಡ್ ಮಾಡುತ್ತಾರೆ.ಅದಾದ 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಫಲಾನುಭವಿಯ ಕೈಸೇರಲಿದೆ ಎಂದರು.

ಸರ್ಕಾರದ ಪಿಂಚಣಿ ಯೋಜನೆಯ ಪ್ರಯೋಜನ ಪಡೆಯಲು ಇನ್ಮುಂದೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ದೂರವಾಣಿ ಕರೆ ಮಾಡಿ ಹಲೋ ಎಂದು ಎರಡು ದಾಖಲೆಗಳ ನಂಬರ್ ಗಳನ್ನು ಕೊಟ್ಟರೆ ಸಾಕು, 72 ಗಂಟೆಯಲ್ಲಿ ಪಿಂಚಣಿ ಪ್ರಮಾಣ ಮನೆ ಬಾಗಿಲಿಗೆ ಬರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...