Wednesday, March 25, 2026
Wednesday, March 25, 2026

ಷಹಬಾಜ್ ನೇತೃತ್ವದ ಸರ್ಕಾರ ಪತನಕ್ಕೆ ದೇಣಿಗೆ ಕೊಡಿ- ಇಮ್ರಾನ್ ಕರೆ

Date:

ಶೆಹಬಾಝ್ ಶರೀಫ್ ನೇತೃತ್ವದ ವಿದೇಶಿ ಬೆಂಬಲಿತ ಸರ್ಕಾರವನ್ನು ಪತನಗೊಳಿಸಲು ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳು ತಮ್ಮ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ (ಪಿಟಿಐ) ಪಕ್ಷಕ್ಕೆ ದೇಣಿಗೆ ನೀಡಬೇಕು ಎಂದು ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಮನವಿ ಮಾಡಿದ್ದಾರೆ.

ವಿಚಿತ್ರವೆಂದರೆ ತಮ್ಮ ಸರ್ಕಾರ ಪತನಗೊಳಿಸಲು ಅಮೆರಿಕ ಸಂಚು ಹೂಡಿತ್ತು ಎಂಬ ಆರೋಪ ಮಾಡಿರುವ ಇಮ್ರಾನ್ ಇದೀಗ ಹಾಲಿ ಸರ್ಕಾರವನ್ನು ಪತನಗೊಳಿಸಲು ಸಾಗರೋತ್ತರ ಪಾಕಿಸ್ತಾನಿಗಳ ನೆರವು ಕೋರಿದ್ದಾರೆ.

ಟ್ವಿಟ್ಟರ್ ವೀಡಿಯೊ ಮೂಲಕ ಸಾಗರೋತ್ತರ ಪಾಕಿಸ್ತಾನಿಗಳಿಗೆ, ಶೆಹಬಾಝ್ ಶರೀಫ್ ಸರ್ಕಾರವನ್ನು ಪದಚ್ಯುತಗೊಳಿಸಿ ಹೊಸ ಚುನಾವಣೆ ನಡೆಸುವ ಸಂಬಂಧ ದೇಣಿಗೆಗಳನ್ನು ಸಂಗ್ರಹಿಸುತ್ತಿರುವ namanzoor.com ಎಂಬ ವೆಬ್‍ಸೈಟನ್ನು ಇಮ್ರಾನ್ ಪರಿಚಯಿಸಿದ್ದಾರೆ.

ಈ ಅಭಿಯಾನವನ್ನು ಹಖಿಖಿ ಅಝಾದಿ ಎಂದು ಕರೆದಿರುವ ಅವರು, ಭ್ರಷ್ಟ ಸರ್ಕಾರವನ್ನು ಪಾಕಿಸ್ತಾನದ 22 ಕೋಟಿ ಮಂದಿಯ ಮೇಲೆ ಹೇರಲಾಗಿದೆ ಎಂದು ಆಪಾದಿಸಿದ್ದಾರೆ.

ಶೆಹಬಾಝ್ ಶರೀಫ್ ಜತೆಗೆ ಸಂಚು ರೂಪಿಸಿರುವ ಅಮೆರಿಕ, ಪಾಕಿಸ್ತಾನಿ ಜನತೆಯ ಮೇಲೆ ಈ ಸರ್ಕಾರವನ್ನು ಹೇರಿದೆ ಎಂದು ಅವರು ಆಪಾದಿಸಿದ್ದಾರೆ.

ಶೆಹಬಾಝ್ ಶರೀಫ್ ಜತೆಗೆ ಸಂಚು ರೂಪಿಸಿರುವ ಅಮೆರಿಕ, ಪಾಕಿಸ್ತಾನಿ ಜನತೆಯ ಮೇಲೆ ಈ ಸರ್ಕಾರವನ್ನು ಹೇರಿದೆ ಎಂದು ಅವರು ಆಪಾದಿಸಿದ್ದಾರೆ.

ಈ ಅಭಿಯಾನವನ್ನು ಹಖಿಖಿ ಅಝಾದಿ ಎಂದು ಕರೆದಿರುವ ಅವರು, ಭ್ರಷ್ಟ ಸರ್ಕಾರವನ್ನು ಪಾಕಿಸ್ತಾನದ 22 ಕೋಟಿ ಮಂದಿಯ ಮೇಲೆ ಹೇರಲಾಗಿದೆ ಎಂದು ಆಪಾದಿಸಿದ್ದಾರೆ.

ಪಾಕಿಸ್ತಾನವನ್ನು ಪಿಟಿಐ ಪಾರ್ಟಿ ಅಥವಾ ಮೂರು ವರ್ಷಗಳಿಂದ ಜೈಲಿನಲ್ಲಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಭ್ರಷ್ಟ ಶರೀಫ್ ಕುಟುಂಬ ಹೀಗೆ ಯಾರು ಆಳ್ವಿಕೆ ಮಾಡಬೇಕು ಎಂದು ನಿರ್ಧರಿಸುವುದು ಪಾಕಿಸ್ತಾನಿಗಳ ಹಕ್ಕು ಎಂದು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...