Thursday, May 21, 2026
Thursday, May 21, 2026

ಷಹಬಾಜ್ ನೇತೃತ್ವದ ಸರ್ಕಾರ ಪತನಕ್ಕೆ ದೇಣಿಗೆ ಕೊಡಿ- ಇಮ್ರಾನ್ ಕರೆ

Date:

ಶೆಹಬಾಝ್ ಶರೀಫ್ ನೇತೃತ್ವದ ವಿದೇಶಿ ಬೆಂಬಲಿತ ಸರ್ಕಾರವನ್ನು ಪತನಗೊಳಿಸಲು ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳು ತಮ್ಮ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ (ಪಿಟಿಐ) ಪಕ್ಷಕ್ಕೆ ದೇಣಿಗೆ ನೀಡಬೇಕು ಎಂದು ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಮನವಿ ಮಾಡಿದ್ದಾರೆ.

ವಿಚಿತ್ರವೆಂದರೆ ತಮ್ಮ ಸರ್ಕಾರ ಪತನಗೊಳಿಸಲು ಅಮೆರಿಕ ಸಂಚು ಹೂಡಿತ್ತು ಎಂಬ ಆರೋಪ ಮಾಡಿರುವ ಇಮ್ರಾನ್ ಇದೀಗ ಹಾಲಿ ಸರ್ಕಾರವನ್ನು ಪತನಗೊಳಿಸಲು ಸಾಗರೋತ್ತರ ಪಾಕಿಸ್ತಾನಿಗಳ ನೆರವು ಕೋರಿದ್ದಾರೆ.

ಟ್ವಿಟ್ಟರ್ ವೀಡಿಯೊ ಮೂಲಕ ಸಾಗರೋತ್ತರ ಪಾಕಿಸ್ತಾನಿಗಳಿಗೆ, ಶೆಹಬಾಝ್ ಶರೀಫ್ ಸರ್ಕಾರವನ್ನು ಪದಚ್ಯುತಗೊಳಿಸಿ ಹೊಸ ಚುನಾವಣೆ ನಡೆಸುವ ಸಂಬಂಧ ದೇಣಿಗೆಗಳನ್ನು ಸಂಗ್ರಹಿಸುತ್ತಿರುವ namanzoor.com ಎಂಬ ವೆಬ್‍ಸೈಟನ್ನು ಇಮ್ರಾನ್ ಪರಿಚಯಿಸಿದ್ದಾರೆ.

ಈ ಅಭಿಯಾನವನ್ನು ಹಖಿಖಿ ಅಝಾದಿ ಎಂದು ಕರೆದಿರುವ ಅವರು, ಭ್ರಷ್ಟ ಸರ್ಕಾರವನ್ನು ಪಾಕಿಸ್ತಾನದ 22 ಕೋಟಿ ಮಂದಿಯ ಮೇಲೆ ಹೇರಲಾಗಿದೆ ಎಂದು ಆಪಾದಿಸಿದ್ದಾರೆ.

ಶೆಹಬಾಝ್ ಶರೀಫ್ ಜತೆಗೆ ಸಂಚು ರೂಪಿಸಿರುವ ಅಮೆರಿಕ, ಪಾಕಿಸ್ತಾನಿ ಜನತೆಯ ಮೇಲೆ ಈ ಸರ್ಕಾರವನ್ನು ಹೇರಿದೆ ಎಂದು ಅವರು ಆಪಾದಿಸಿದ್ದಾರೆ.

ಶೆಹಬಾಝ್ ಶರೀಫ್ ಜತೆಗೆ ಸಂಚು ರೂಪಿಸಿರುವ ಅಮೆರಿಕ, ಪಾಕಿಸ್ತಾನಿ ಜನತೆಯ ಮೇಲೆ ಈ ಸರ್ಕಾರವನ್ನು ಹೇರಿದೆ ಎಂದು ಅವರು ಆಪಾದಿಸಿದ್ದಾರೆ.

ಈ ಅಭಿಯಾನವನ್ನು ಹಖಿಖಿ ಅಝಾದಿ ಎಂದು ಕರೆದಿರುವ ಅವರು, ಭ್ರಷ್ಟ ಸರ್ಕಾರವನ್ನು ಪಾಕಿಸ್ತಾನದ 22 ಕೋಟಿ ಮಂದಿಯ ಮೇಲೆ ಹೇರಲಾಗಿದೆ ಎಂದು ಆಪಾದಿಸಿದ್ದಾರೆ.

ಪಾಕಿಸ್ತಾನವನ್ನು ಪಿಟಿಐ ಪಾರ್ಟಿ ಅಥವಾ ಮೂರು ವರ್ಷಗಳಿಂದ ಜೈಲಿನಲ್ಲಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಭ್ರಷ್ಟ ಶರೀಫ್ ಕುಟುಂಬ ಹೀಗೆ ಯಾರು ಆಳ್ವಿಕೆ ಮಾಡಬೇಕು ಎಂದು ನಿರ್ಧರಿಸುವುದು ಪಾಕಿಸ್ತಾನಿಗಳ ಹಕ್ಕು ಎಂದು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...

DC Shivamogga ಮೇ ಮತ್ತು ಜೂನ್ ತಿಂಗಳ ಪಡಿತರ ಅಕ್ಕಿ ವಿತರಣೆ ಮಾಹಿತಿ

DC Shivamogga ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಮತ್ತು...