Tuesday, August 25, 2026
Tuesday, August 25, 2026

ಎಲ್ಲರಿಗೂ ಸಮಾಧಾನ ತರುವ ಸುದ್ದಿ- ಕೋವಿಡ್ ಅಂತ್ಯದತ್ತ ಸಾಗಿದೆ

Date:

ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ 24 ಗಂಟೆಗಳಲ್ಲಿ 975 ಕೋವಿಡ್ ಪ್ರಕರಣಗಳು ಪತ್ತೆಯಾಗಿ 4 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,40,947ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,749ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,366ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 796 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಚೇತರಿಸಿಕೊಂಡವರ ಸಂಖ್ಯೆ 4,25,07,834ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 3,67,213 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ಈ ವರೆಗೂ 83,11,77,370 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದರು. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,86,30,62,546 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...