Saturday, December 13, 2025
Saturday, December 13, 2025

ಕಾರ್ಯಕಾರಿಣಿ ಸಭೆಗೆ ತಂಪೆರೆದ ಮಳೆರಾಯ

Date:

ಶನಿವಾರ ವಿಜಯನಗರದಲ್ಲಿ ಸುರಿದ ಮಳೆಗೆ ಮತ್ತು ಗಾಳಿಗೆ ಬಿಜೆಪಿ ಸಭೆಯ ಪೆಂಡಾಲ್ ಗೆ ಸಾಕಷ್ಟು ಹಾನಿಯಾಗಿದೆ.

ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಹಾಕಲಾಗಿದ್ದ ಸ್ವಾಗತ ಕಮಾನು, ಫ್ಲೆಕ್ಸ್‌ಗಳು ನೆಲಕ್ಕುರುಳಿ ಬಿದ್ದಿವೆ.

ಸಭಾ ಮಂಟಪದ ಮುಂಭಾಗ ಮಂಟಪದ ಮಾದರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗಿತ್ತು. ಬಾರಿಗಾಳಿ ಮಳೆಯಿಂದಾಗಿ ಅದು ಸಂಪೂರ್ಣ ನೆಲಕ್ಕುರುಳಿದೆ. ಕಲ್ಲಿನ ರಥದ ಪ್ರತಿಕೃತಿಯಷ್ಟೇ ಉಳಿದುಕೊಂಡಿದೆ.

ಇನ್ನು, ವರ್ತುಲ ರಸ್ತೆಯುದ್ದಕ್ಕೂ ಹಾಕಿದ್ದ ಸ್ವಾಗತ ಕಮಾನುಗಳು, ಫ್ಲೆಕ್ಸ್‌ಗಳು ಕೆಳಗೆ ಬಿದ್ದಿವೆ. ಬ್ಯಾನರ್‌ಗಳು ಹರಿದು ಹೋಗಿವೆ.

ಸ್ವಾಗತ ಕಮಾನುಗಳು ರಸ್ತೆಯ ಮಧ್ಯದಲ್ಲಿಯೇ ಬಿದ್ದದ್ದರಿಂದ ವಾಹನ ಸಂಚಾರಕ್ಕೆ ಕೊಂಚ ತೊಂದರೆ ಉಂಟಾಗಿತ್ತು. ನಂತರ ಕ್ರೇನ್‌ ಮೂಲಕ ಅದನ್ನು ತೆರವುಗೊಳಿಸಲಾಯಿತು.

ಜಿಲ್ಲೆಯ ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿರುವುದು ವರದಿಯಾಗಿದೆ.

ಇಂದಿನ ಕಾರ್ಯಕ್ರಮಕ್ಕೆ ಮತ್ತೆ ಅವುಗಳನ್ನು ಫೀಕ್ಸ್ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...