Monday, August 24, 2026
Monday, August 24, 2026

ಇಬ್ರಾಹಿಂ ಗೆ ಜೆಡಿಎಸ್ ರಾಜ್ಯಾಧ್ಯಕ್ಷ‌ ಪಟ್ಟಎಚ್.ಡಿ.ಕೆ ಆನಂದಭಾಷ್ಪ

Date:

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತಹ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಡಿ ಕುಮಾರಸ್ವಾಮಿ ಅವರು ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡುತ್ತಾ ಕಣ್ಣೀರಿಟ್ಟ ಪ್ರಸಂಗ ಜರುಗಿತು.

ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿ, ಕಣ್ಣೀರಿಡುತ್ತಲೇ ಮಾತನಾಡಿದಂತಹ ಹೆಚ್ ಕೆ ಕುಮಾರಸ್ವಾಮಿ ಅವರು, ನಾನಾಗಿಯೇ ಪಕ್ಷದಲ್ಲಿ ಏನನ್ನೂ ಕೇಳಿಲ್ಲ. ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನನ್ನು ಗುರುತಿಸಿ ಈ ಮಟ್ಟಕ್ಕೆ ಬೆಳೆಸಿದೆ. ಎಲ್ಲಾ ಕಾರ್ಯಕ್ರಮಗಳಿಗೂ ಕುಮಾರಸ್ವಾಮಿ ಒಬ್ಬರೇ ಓಡಾಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

ಪಕ್ಷ ನಮ್ಮದು, ಅಧಿಕಾರ ನಮ್ಮದಲ್ಲ. ನಮ್ಮ ಪಕ್ಷದಲ್ಲೂ ಅಹಿಂದ ಇದೆ. ಅಗ್ಗದ ಪ್ರಚಾರಕ್ಕೆ ಬೇಗ ಬಲಿಯಾಗುತ್ತೇವೆ. ಅದೇ ನಮ್ಮ ಪಕ್ಷದ ದೌರ್ಬಲ್ಯವಾಗಿದೆ. ಅತ್ಯಂತ ಸಂತೋಷದಿಂದ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದೇನೆ. ನಮ್ಮಲ್ಲಿ ಈಗ ಹೊಸ ಶಕೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...