Monday, August 24, 2026
Monday, August 24, 2026

ಶಿವಮೊಗ್ಗದಿಂದ ತಿರುಪತಿ ಸ‌ನಿಹಕ್ಕೆ ರೈಲು ಸೇವೆಗೆ ಚಾಲನೆ

Date:

ಶಿವಮೊಗ್ಗದಿಂದ ತಿರುಪತಿ ಮಾರ್ಗವಾಗಿ ಚನ್ನೈ ಸಂಪರ್ಕಿಸುವ ನೂತನ ರೈಲು ಸೇವೆಗೆ ಸಂಸದ ಬಿ. ವೈ. ರಾಘವೇಂದ್ರ ಅವರು ನಿನ್ನೆ ಚಾಲನೆ ನೀಡಿದ್ದಾರೆ.

ಶಿವಮೊಗ್ಗದಿಂದ ಎರಡು ದಿನ ರೇಣಿಗುಂಟಾ ಮಾರ್ಗ ವಾಗಿ ಚೆನ್ನೈಗೆ ರೈಲು ತೆರಳುತ್ತದೆ.

ರೈಲ್ವೆ ಇಲಾಖೆಗೆ ನಿರಂತರ ಮನವಿಗಳ ಫಲವಾಗಿ ಶಿವಮೊಗ್ಗ, ಬೆಂಗಳೂರು ಮದ್ರಾಸ್‌ ಎಕ್ಸಪ್ರೆಸ್ ಮತ್ತು ಶಿವಮೊಗ್ಗ,ರೇಣಿಗುಂಟ ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್‌ಗೆ ತೆರಳುವ ಯಾತ್ರಾರ್ಥಿಗಳು ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ,ರೇಣಿಗುಂಟ ಮದ್ರಾಸ್, ಎಕ್ಸಪ್ರೆಸ್ ರೈಲು ಸೇವೆಗೆ ಚಾಲನೆ ನೀಡಲಾಗಿದೆ.

ಶಿವಮೊಗ್ಗ-ಶಿಕಾರಿಪುರ ರಾಣಿಬೆನ್ನೂರು ರೈಲು ಮಾರ್ಗವು ಸುಮಾರು 956 ಕೋಟಿ ಅಂದಾಜು ವೆಚ್ಚದಲ್ಲಿ 102 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ಕಿ.ಮೀ. ಉದ್ದದ ರೈಲು ನಿರ್ಮಾಣ ಯೋಜನೆಯನ್ನು 2018-19ನೇ ಕೇಂದ್ರ ಮುಂಗಡ ಪತ್ರದಲ್ಲಿ ಮಂಜೂರು ಮಾಡಲಾಗಿದೆ.

ಶಿವಮೊಗ್ಗ ಟೌನ್ ರೈಲ್ವೇ ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಬಿ. ವೈ. ರಾಘವೇಂದ್ರ ಅವರು, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಲ್ಲಿ ಮೊದಲ ನೂತನ ರೈಲ್ವೆ ಯೋಜನೆಯಾಗಿದೆ ಎಂದು ತಿಳಿಸಿದರು.

ಈ ಹಿಂದೆ ಬೆಂಗಳೂರು ಮಾರ್ಗವಾಗಿ ಮದ್ರಾಸ್ ಗೆ ತೆರಳುತ್ತಿದ್ದ ಶಿವಮೊಗ್ಗ-ಮದ್ರಾಸ್ ಎಕ್ಸ್ ಪ್ರೆಸ್ ರೈಲು ಇದೀಗ ಶಿವಮೊಗ್ಗ-ತಿರುಪತಿ ರೈಲಿನೊಂದಿಗೆ ಸೇರ್ಪಡೆಯಾಗಿ ರೇಣಿಗುಂಟ ಮಾರ್ಗವಾಗ ಚೆನ್ನೈ ತಲುಪಲಿದೆ. ಈ ನೂತನ ರೈಲು ಸೇವೆಯು ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದ್ರಾಸ್ ನಿಂದ ಸೋಮವಾರ ಮತ್ತು ಬುಧವಾರಗಳಂದು ಸಂಚರಿಸಲಿದೆ.

ವಾರಕ್ಕೆ ಎರಡುದಿನ ಸಂಚರಿಸುವ ಈ ರೈಲು ಸೇವೆ ಒದಗಿಸಲಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...