Thursday, October 3, 2024
Thursday, October 3, 2024

ದಾವಣಗೆರೆ- ತುಮಕೂರು ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ

Date:

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್‌ ಕುಮಾರ್‌ ಸೂಚನೆ ನೀಡಿರುವ ಪ್ರಕಾರ ಮೇ ಅಂತ್ಯದ ವೇಳೆಗೆ .ದಾವಣಗೆರೆ- ಚಿತ್ರದುರ್ಗ-ತುಮಕೂರು ನೂತನ ಮಾರ್ಗದ ಭೂಸ್ವಾಧೀನಕ್ಕೆ ಅಧಿಕಾರಿಗಳ ತಂಡ ರಚಿಸಿ ಜಂಟಿ ಸರ್ವೇ ಕಾರ್ಯಕೈಗೊಳ್ಳವಂತೆ ತಿಳಿಸಿರುತ್ತಾರೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೂತನ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಂದಾಯ, ಭೂಮಾಪನ, ರೈಲ್ವೆ, ಲೋಕೋಪಯೋಗಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡವು ಸರ್ವೇ ನಡೆಸಬೇಕು ಮತ್ತು ಮೇ ಅಂತ್ಯಕ್ಕೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಸರ್ಕಾರದ ಮುಂದೆ ತರಲು ಮುಂದಾಗಬೇಕು . ಮೇ ತಿಂಗಳ ಮಧ್ಯದ ವೇಳೆಗೆ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದರು. ಭೂಸ್ವಾಧೀನಕ್ಕೆ ಅಗತ್ಯ ಇರುವ 200 ಕೋಟಿ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಆರ್‌.ಚಂದ್ರಯ್ಯ ಮಾತನಾಡಿ, ಹಿರಿಯೂರು ತಾಲ್ಲೂಕಿಗೆ 77 ಕೋಟಿ ಪರಿಹಾರ‌ ಬಿಡುಗಡೆಯಾಗಿದ್ದು, 49 ಕೋಟಿ ಪರಿಹಾರ ವಿತರಿಸಲಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 183 ಎಕರೆ ಭೂಮಿ ಸ್ವಾಧೀನಕ್ಕೆ ಪರಿಹಾರ ನಿಗದಿಪಡಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಎನ್‌. ಸತೀಶ್‌ ಬಾಬು, ಭೂದಾಖಲೆ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಅಂತು ಬಹುದಿನದ ಕನಸು ನನಸಾಗುವ ಕಾಲ ಹತ್ತಿರಕ್ಕೆ ಬಂದಿದೆ.ದಾವಣಗೆರೆಯಿಂದ ತುಮಕೂರಿನ ತನಕ ಬರುವ ಹಳ್ಳಿಗಳಿಗೆ ಅನುಕೂಲ ಕಲ್ಪಿಸಿ ಬಡವರಿಗೆ ಅನುಕೂಲ ಅಗುವುದರಲ್ಲಿ ಸಂಶಯವಿಲ್ಲ. ತಕ್ಷಣ ಕಾರ್ಯವನ್ನು ಪ್ರಾರಂಭಿಸಲು ರೈಲ್ವೆ ಇಲಾಖೆ ಸರ್ಕಾರದ ಜೊತೆ ಹೆಚ್ಚಾಗಿ ಸಂಪರ್ಕ ಇಡಲು ಸಾರ್ವಜನಿಕರು ಮನವಿ ಮಾಡಿದರು.

ವರದಿ: ಮುರುಳೀಧರ್ ನಾಡಿಗೇರ್
ಭರಮಸಾಗರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...