Thursday, July 9, 2026
Thursday, July 9, 2026

ಕೋವಿಡ್ ಮಾಹಿತಿ ಕೇರಳದ ಮೌನಕ್ಕೆ ಕೇಂದ್ರ ತರಾಟೆ

Date:

ಇತ್ತೀಚೆಗೆ ನಿತ್ಯದ ಕೋವಿಡ್‌ ಪ್ರಕರಣಗಳ ಪ್ರಕಟಣೆ ನಿಲ್ಲಿಸಿದ್ದ ಕೇರಳ ಸರ್ಕಾರ, 5 ದಿನಗಳ ಮೌನದ ಬಳಿಕ ಸೋಮವಾರ ಏಕಾಏಕಿ ರಾಜ್ಯದಲ್ಲಿ 940 ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಹಾಗೂ 213 ಸಾವು ಸಂಭವಿಸಿವೆ ಎಂದು ವರದಿ ನೀಡಿದೆ.

5 ದಿನಗಳ ಅಂತರದ ಬಳಿಕ ಕೇಂದ್ರ ಸರ್ಕಾರಕ್ಕೆ ನೀಡಿದ ಈ ವರದಿಯು ದೇಶದ ಕೋವಿಡ್‌ ದೈನಂದಿನ ಅಂಕಿ ಅಂಶಗಳಲ್ಲಿ ಭಾರೀ ಏರುಪೇರು ಸೃಷ್ಟಿಸಿದೆ.

ಹೀಗಾಗಿ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ಈ ನಿತ್ಯ ವರದಿ ನಿಡುವಂತೆ ತಾಕೀತು ಮಾಡಿದೆ.

ಈ ಕುರಿತು ಕೇರಳ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಲವ್‌ ಅಗರ್‌ವಾಲ್‌, ‘ಈ ರೀತಿ ದತ್ತಾಂಶ ನೀಡಿಕೆಯಲ್ಲಿ ಏರುಪೇರು ಮಾಡುವುದು ಸಲ್ಲದು.

ಹೀಗೆ ಕೆಲವು ದಿನಗಳ ಬಳಿಕ ಕೋವಿಡ್‌ ವರದಿಯನ್ನು ನೀವು ನೀಡಿದ್ದರಿಂದ ಅದು ರಾಷ್ಟ್ರೀಯ ಕೋವಿಡ್‌ ಅಂಕಿಸಂಖ್ಯೆಗಳ ಮೇಲೆ ಪರಿಣಾಮ ಬೀರಿದೆ.

ದೇಶದ ಕೇಸುಗಳ ಸಂಖ್ಯೆ ಒಂದೇ ದಿನದಲ್ಲಿ ಶೇ.90ರಷ್ಟುಹಾಗೂ ಪಾಸಿಟಿವಿಟಿ ಶೇ.165ರಷ್ಟು ಏರಿದೆ.

ಸೋಂಕಿನ ಪರಿಣಾಮ ಅರ್ಥೈಸಿಕೊಳ್ಳಲು ನಿತ್ಯ ಕೋವಿಡ್‌ ವರದಿ ನೀಡುವುದು ಅಗತ್ಯ. ಇದರಿಂದ ಸೋಂಕಿನ ಮೇಲೆ ನಿಗಾ ಇರಿಸಿ ನಿರ್ವಹಣೆಗೆ ಕೇಂದ್ರ-ರಾಜ್ಯ-ತಾಲೂಕು ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಲು ನೆರವಾಗಲಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...