Friday, February 6, 2026
Friday, February 6, 2026

ಸಾರ್ವಜನಿಕ ಫ್ಲೆಕ್ಸ್ ಮೂಲಕ ಕುಂದುಕೊರತೆ ಹೇಳಿಕೊಂಡ ಶೃಂಗೇರಿ

Date:

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಶೃಂಗೇರಿಗೂ ಸಿಎಂ ಭೇಟಿ ನೀಡುತ್ತಿದ್ದು, ಸಿಎಂ ಭೇಟಿಗೆ ಸ್ವಾಗತ ಕೋರಿ ಅಣಕವಾಡುತ್ತಿರುವ ಬ್ಯಾನರೊಂದು ಪತ್ತೆಯಾಗಿದೆ.

“ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು” ಎಂದು ಸಿಎಂ ಗೆ ಸೂಚಿಸುತ್ತಿರುವ ಬ್ಯಾನರ್ ಗಮನ ಸೆಳೆಯುತ್ತಿದೆ.

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ಪದೇ ಪದೇ ಮಾತು ತಪ್ಪುತ್ತಿದೆ. ಹೀಗಾಗಿ ಸಿಎಂ ಗೆ ಸ್ವಾಗತ ಕೋರಿ ನಿಧಾನವಾಗಿ ಚಲಿಸುವಂತೆ ಎಚ್ಚರಿಸುವ ಬ್ಯಾನರ್ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಂಗೇರಿ ಸುಸಜ್ಜಿತ ಆಸ್ಪತ್ರೆ ಮಂಜೂರಾರಿ ಕಡತವು 15 ವರ್ಷಗಳಿಂದ ಪ್ರಗತಿಯಲ್ಲಿದೆ. ತೀವ್ರ ಅನಾರೋಗ್ಯ ಸಂದರ್ಭದಲ್ಲಿ ಸುಮಾರು ನೂರು ಕಿ.ಮೀ ದೂರದ ಆಸ್ಪತ್ರೆಗೆ ತೆರೆಳಬೇಕಾದ ಕಾರಣ, ದಯವಿಟ್ಟು ತಮ್ಮ ಹಾಗೂ ನಮ್ಮ ಊರಿನವರ ಸುರಕ್ಷತೆಯ ದೃಷ್ಟಿಯಿಂದ ವಾಹನದಲ್ಲಿ ನಿಧಾನವಾಗಿ ಚಲಿಸಿ” ಎಂದು ಬರೆಯಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...