Wednesday, December 17, 2025
Wednesday, December 17, 2025

ಆದರ್ಶವಾಗಿರಲು ದೈವ ಭಕ್ತಿ ಗುರು ಭಕ್ತಿ ಆತ್ಮವಿಶ್ವಾಸ ಇರಬೇಕು-ಬೊಮ್ಮಾಯಿ

Date:

ಪೂಜ್ಯರು ಕೇವಲ ಮಠವನ್ನು ಮಾತ್ರ ಕಟ್ಟದೆ ನಾವೆಲ್ಲರೂ ಒಂದೇ ಎಂಬ ಭಾವನೆಯಲ್ಲಿ ಜನರ ಮನಸ್ಸನ್ನು ಕಟ್ಟುತ್ತಿದ್ದಾರೆ. ನಾನು ಸಿಎಂ ಆಗಿ ಬಂದಿಲ್ಲ. ಭಕ್ತನಾಗಿ ಬಂದಿದ್ದೇನೆ. ಶೃಂಗೇರಿ ಶಾರದಾಂಬೆ ಹಾಗೂ ಹರಿಹರಪುರ ಮಠದ ಶಾರದಾ ಲಕ್ಷ್ಮಿ ನರಸಿಂಹ ಸ್ವಾಮಿ ದೇವರಿಂದ ರಾಜ್ಯವನ್ನು ಮುನ್ನಡೆಸುವ ಹೊಸ ಪ್ರೇರಣೆ ಪಡೆದುಕೊಂಡು ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶೃಂಗೇರಿ ಶಾರದಾಂಬೆ ಹಾಗೂ ಕೊಪ್ಪ ತಾಲೂಕಿನ ಐತಿಹಾಸಿಕ ಹರಿಹರಪುರ ಮಠಕ್ಕೆ ಭೇಟಿ ನೀಡಿದ ಸಿಎಂ, ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಅಪ್ಪ-ಅಮ್ಮ, ಅಕ್ಕ-ತಂಗಿ, ಅಣ್ಣ-ತಮ್ಮ, ಗುರು ಎಲ್ಲರ ಸಹಾಯದಲ್ಲಿ ಬೆಳೆಯುತ್ತಿದ್ದೇವೆ. ಇದು ನಮ್ಮ ಅಕೌಂಟ್‌ನಲ್ಲಿ ಕ್ರೆಡಿಟ್ ಆಗಿರುತ್ತದೆ ಎಂದರು.

ಸಮಾಜ ಆದರ್ಶವಾಗಿ ಇರಬೇಕಾದರೆ ದೈವ ಭಕ್ತಿ, ಗುರುಭಕ್ತಿ ಹಾಗೂ ಆತ್ಮವಿಶ್ವಾಸ ಇರಬೇಕು. ಅದು ಬಹಳ ಮುಖ್ಯ. ಉತ್ಕ್ರಷ್ಟವಾದ ಪ್ರೀತಿಯೇ ಭಕ್ತಿ ಹಾಗೂ ಪವಿತ್ರ. ನಾವು ದೇವರ ಬಳಿ ಅಂತಸ್ತು, ಐಶ್ವರ್ಯ ಕೇಳುತ್ತೇವೆ ಎಂದು ತಿಳಿಸಿದರು.

ಸ್ವಾಮೀಜಿಗಳು ಲೋಕಕ್ಕಾಗಿ ಕೇಳಿ ಕೊಳ್ಳುತ್ತಾರೆ. ನಿಸ್ವಾರ್ಥ ಭಕ್ತಿಯ ಪ್ರಪಂಚದಲ್ಲಿ ನೀವು ಇದ್ದೀರಿ.ಭಗವಂತನಿಗೆ ಯಾರಿಗೆ, ಯಾವಾಗ, ಏನು ಕೊಡಬೇಕು ಎಂಬುದು ಗೊತ್ತಿದೆ. ಭಗವಂತ ಜನ್ಮ ನೀಡಿದ್ದಾನೆ. ನಾವು ಏಕೆ ಹುಟ್ಟಿದ್ದೇವೆ ಎಂಬುದಕ್ಕೆ ಉತ್ತರ ನಮ್ಮೊಳಗೆ ಇದೆ. ನಾವು ಅದನ್ನು ತಿಳಿದುಕೊಂಡರೆ ಜೀವನ ಸಾರ್ಥಕ. ಗುರುವಿನ ಬಳಿ ಭಕ್ತಿಯಲ್ಲಿ ಕರಗಿ ಲೀನವಾಗಬೇಕು.

ನಾನು ಎಂಬ ಅಸ್ತಿತ್ವವನ್ನು ವಿಸರ್ಜನೆ ಮಾಡಬೇಕು. ನಾನು ಎಂಬುದು ನಿಸರ್ಗದ ಸಣ್ಣ ಕಣ. ಯಾರೂ ಕೂಡ ಸರ್ವ ಸ್ವತಂತ್ರರಾಗಿ ಹುಟ್ಟಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...