Saturday, June 6, 2026
Saturday, June 6, 2026

ಪಟ್ಟು ಬಿಡದ ರಷ್ಯ ಸೆಡ್ಡು ಹೊಡೆಯುತ್ತಿರುವ ಉಕ್ರೇನ್

Date:

ಉಕ್ರೇನ್‌ನ ಈಶಾನ್ಯ ಭಾಗದಲ್ಲಿರುವ ಮಾರಿಯುಪೋಲ್ ನಗರವನ್ನು ರಷ್ಯಾ ಪಡೆಗಳು ಸುತ್ತುವರೆದಿವೆ. ಉಕ್ರೇನ್‌ ಸೈನಿಕರಿಗೆ ಶರಣಾಗುವಂತೆ ಮತ್ತೊಂದು ಸೂಚನೆಯನ್ನು ರಷ್ಯಾ ರವಾನಿಸಿದೆ.

ಮಾರಿಯುಪೋಲ್‌ ನಗರದ ಸುತ್ತಲೂ ರಷ್ಯಾ ಹೆಚ್ಚಿನ ಪಡೆಗಳನ್ನು ನಿಯೋಜನೆ ಮಾಡಿದೆ. ಈ ಮೂಲಕ ಇಂದು ದಾಳಿಯನ್ನು ತೀವ್ರಗೊಳಿಸುವ ಸೂಚನೆಯನ್ನು ರಷ್ಯಾ ನೀಡಿದೆ.

ಮತ್ತೊಂದು ಕಡೆ ಉಕ್ರೇನ್‌ಗೆ ವಾಯು ರಕ್ಷಣಾ ವ್ಯವಸ್ಥೆ, ಯುದ್ಧವಿಮಾನ ಸೇರಿದಂತೆ ವಿವಿಧ ಉಪಕರಣಗಳನ್ನು ಅಮೆರಿಕ, ಬ್ರಿಟನ್ ಸೇರಿದಂತೆ ವಿವಿಧ ದೇಶಗಳು ಪೂರೈಕೆ ಮಾಡುತ್ತಿವೆ.

ನಿನ್ನೆ ಸಹ ರಷ್ಯಾ ಸೈನಿಕರು ಉಕ್ರೇನ್ ಹೋರಾಟಗಾರರಿಗೆ ಶಸ್ತ್ರಾಸ್ತ್ರ ಕೆಳಗಿಡುವಂತೆ ಸೂಚನೆ ನೀಡಿದ್ದರು.ನಂತರ ಮಾರಿಯುಪೋಲ್‌ ನಗರದ ಮೇಲೆ ದಾಳಿಯನ್ನು ಸ್ಥಗಿತಗೊಳಿಸಲಾಗಿತ್ತು.

ಇಂದು ಮಧ್ಯಾಹ್ನ 2 ಗಂಟೆಯೊಳಗೆ ಉಕ್ರೇನ್ ಸೈನಿಕರು ಶರಣಾಗಬೇಕು ಎಂದು ರಷ್ಯಾಪಡೆಗಳು ಮತ್ತೊಂದು ಗಡುವು ನೀಡಿವೆ. ಈ ವಾರ ರಷ್ಯಾ,ಉಕ್ರೇನ್ ಯುದ್ಧ ನಿರ್ಣಾಯಕಘಟ್ಟ ತಲುಪುವ ಎಲ್ಲಾ ಸೂಚನೆಗಳು ಸಿಗುತ್ತಿವೆ.

ಇನ್ನೂ ಉಕ್ರೇನ್‌ನ ಡೋನ್ಬಾಸ್ ನಗರ ಆಕ್ರಮಿಸಿಕೊಳ್ಳಲು ರಷ್ಯಾ ಪ್ರಯತ್ನ ನಡೆಸಿದೆ. ನಿನ್ನೆಯಿಂದ ಈ ನಗರದ ಮೇಲೆ ರಷ್ಯಾ ದಾಳಿ ಆರಂಭಿಸಿದೆ. ಕಲ್ಲಿದ್ದಲು ಮತ್ತು ಉಕ್ಕು ಉತ್ಪಾದನೆ ಮಾಡುವ ಪ್ರಮುಖ ನಗರ ಇದಾಗಿದೆ.

ಬಂದರು ನಗರವಾಗಿರುವ ಮಾರಿಯುಪೋಲ್‌ನಲ್ಲಿಯೂ ಉಕ್ಕು ತಯಾರಿಕಾ ಘಟಕವಿದೆ. ಆದ್ದರಿಂದ ರಷ್ಯಾ ಪಡೆಗಳು ಆ ನಗರ ಸುತ್ತುವರೆದು ಅದನ್ನು ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿವೆ.

ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿ ದಾಳಿಯನ್ನು ಆರಂಭಿಸಿತ್ತು. ಮೊದಲೇ ಮಾರಿಯುಪೋಲ್‌ನ ನಗರಕ್ಕೆ ಹೋಗುವ ರಸ್ತೆಗಳನ್ನು ರಷ್ಯಾ ಪಡೆಗಳು ತಮ್ಮ ವಶಕ್ಕೆ ಪಡೆದಿದ್ದವು. ಇದರಿಂದಾಗಿ ನಗರಕ್ಕೆ ಆಹಾರ, ನೀರು ಪೂರೈಕೆಗೆ ತೊಂದರೆಯಾಗಿತ್ತು.

ರಷ್ಯಾ ದಾಳಿಯಿಂದ ಈ ನಗರದಲ್ಲಿ ಇದುವರೆಗೂ ಸುಮಾರು 20 ಸಾವಿರ ಜನರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ರಷ್ಯಾದ ದಾಳಿ ತೀವ್ರವಾಗುತ್ತಿದ್ದಂತೆಯೇ ಉಕ್ರೇನ್‌ಗೆ ಅಮೆರಿಕ ಸೇರಿದಂತೆ ವಿವಿಧ ದೇಶಗಳ ಬೆಂಬಲವೂ ಕೂಡ ಹೆಚ್ಚಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ...