Sunday, May 17, 2026
Sunday, May 17, 2026

ಟಾಟಾ ಐಪಿಎಲ್ 22 ಲಕ್ನೋಗೆ ಲಕ್ ನೋ ಎಂದ ಆರ್ ಸಿ ಬಿ ತಂಡ

Date:

ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಅಬ್ಬರಕ್ಕೆ ಬಲಿಷ್ಠ ಲಕ್ನೋ ಸೂಪರ್‌ ಜೈಂಟ್ಸ್ ತಂಡ ಸೋಲೊಪ್ಪಿಕೊಂಡಿತು. ನಾಯಕ ಫಾಫ್ ಡುಪ್ಲೆಸಿಸ್ ಅಮೋಘ ಆಟ ಪ್ರದರ್ಶನದ ಜೊತೆಗೆ, ಅಚ್ಚುಕಟ್ಟಿನ ಬೌಲಿಂಗ್‌ನ ಮೂಲಕ ಆರ್‌ಸಿಬಿ ಪಂದ್ಯ ಗೆದ್ದುಕೊಂಡಿದೆ.

ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೇರಿದೆ. ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಪರ ಅನುಜ್ ರಾವತ್‌, ವಿರಾಟ್ ಕೊಹ್ಲಿ ಮತ್ತೊಮ್ಮೆ ವೈಫಲ್ಯವು ತಂಡಕ್ಕೆ ಉತ್ತಮ ಆರಂಭ ನೀಡಲು ಸಾಧ್ಯವಾಗಲ್ಲಿಲ್ಲ.

ಆದರೆ, ಇದರ ನಡುವೆ ಭರ್ಜರಿ ಆಟವಾಡಿದ ನಾಯಕ ಫಾಫ್ ಡುಪ್ಲೆಸಿಸ್ ಒತ್ತಡದ ಸನ್ನಿವೇಶದಲ್ಲಿ ಯಾವ ರೀತಿಯ ಆಟವಾಡಬಹುದು ಎಂಬುದನ್ನ ತೋರಿಸಿಕೊಟ್ಟರು.

ಕೇವಲ 4 ರನ್‌ಗಳ ಅಂತರದಲ್ಲಿ ಫಾಫ್‌ ಶತಕ ಮಿಸ್ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಳೆದುಕೊಂಡ ಆರ್‌ಸಿಬಿ ಮೇಲೆ ಉಂಟಾಗಿದ್ದ ಒತ್ತಡವನ್ನ ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾದರು.

ಲಕ್ನೋ ಸೂಪರ್ ಜೈಂಟ್ಸ್ ಬೌಲರ್‌ಗಳ ಮೇಲೆ ಕೌಂಟರ್ ಅಟ್ಯಾಕ್ ಮಾಡಿದ ಫಾಫ್ ಅಮೋಘ ಆಟವಾಡಿದರು. ಆದರೆ, ಕೇವಲ 4 ರನ್‌ಗಳ ಅಂತರದಲ್ಲಿ ಸೆಂಚುರಿ ಮಿಸ್ ಮಾಡಿಕೊಂಡರು.

64 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 96 ರನ್ ಕಲೆಹಾಕಿದ ಫಾಫ್ ನಿಗದಿತ 20 ಓವರ್‌ ಮುಕ್ತಾಯಕ್ಕೆ ಇನ್ನೊಂದು ಎಸೆತ ಬಾಕಿ ಇರುವಂತೆ ಕ್ಯಾಚಿತ್ತು, ಪೆವಿಲಿಯನ್ ಸೇರಿಕೊಂಡಿದ್ದು ಮಾತ್ರ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ನಿರಾಸೆ ತಂದಿತು.

ಅಂತಿಮವಾಗಿ ಆರ್‌ಸಿಬಿ ಮ್ಯಾಕ್ಸ್‌ವೆಲ್ 23, ಶಬಾಜ್ ಅಹ್ಮದ್ 26 ರನ್‌ಗಳ ಕೊಡುಗೆಯಿಂದ 6 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು.
ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಳೆದುಕೊಂಡ ಆರ್‌ಸಿಬಿ ಮೇಲೆ ಉಂಟಾಗಿದ್ದ ಒತ್ತಡವನ್ನ ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾದರು. ಲಕ್ನೋ ಸೂಪರ್ ಜೈಂಟ್ಸ್ ಬೌಲರ್‌ಗಳ ಮೇಲೆ ಕೌಂಟರ್ ಅಟ್ಯಾಕ್ ಮಾಡಿದ ಫಾಫ್ ಅಮೋಘ ಆಟವಾಡಿದ್ರು. ಆದ್ರೆ ಕೇವಲ 4 ರನ್‌ಗಳ ಅಂತರದಲ್ಲಿ ಸೆಂಚುರಿ ಮಿಸ್ ಮಾಡಿಕೊಂಡರು.

64 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 96 ರನ್ ಕಲೆಹಾಕಿದ ಫಾಫ್ ನಿಗದಿತ 20 ಓವರ್‌ ಮುಕ್ತಾಯಕ್ಕೆ ಇನ್ನೊಂದು ಎಸೆತ ಬಾಕಿ ಇರುವಂತೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡಿದ್ದು ಮಾತ್ರ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ನಿರಾಸೆ ತಂದಿತು. ಅಂತಿಮವಾಗಿ ಆರ್‌ಸಿಬಿ ಮ್ಯಾಕ್ಸ್‌ವೆಲ್ 23, ಶಬಾಜ್ ಅಹ್ಮದ್ 26 ರನ್‌ಗಳ ಕೊಡುಗೆಯಿಂದ 6 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು.

ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಳೆದುಕೊಂಡ ಆರ್‌ಸಿಬಿ ಮೇಲೆ ಉಂಟಾಗಿದ್ದ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ಯಶಸ್ವಿಯಾದರು.

ಲಕ್ನೋ ಸೂಪರ್ ಜೈಂಟ್ಸ್ ಬೌಲರ್‌ಗಳ ಮೇಲೆ ಕೌಂಟರ್ ಅಟ್ಯಾಕ್ ಮಾಡಿದ ಫಾಫ್ ಅಮೋಘ ಆಟವಾಡಿದರು. ಆದರೆ ಕೇವಲ 4 ರನ್‌ಗಳ ಅಂತರದಲ್ಲಿ ಸೆಂಚುರಿ ಮಿಸ್ ಮಾಡಿಕೊಂಡರು.

64 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 96 ರನ್ ಕಲೆಹಾಕಿದ ಫಾಫ್ ನಿಗದಿತ 20 ಓವರ್‌ ಮುಕ್ತಾಯಕ್ಕೆ ಇನ್ನೊಂದು ಎಸೆತ ಬಾಕಿ ಇರುವಂತೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡಿದ್ದು ಮಾತ್ರ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ನಿರಾಸೆ ತಂದಿತು. ಅಂತಿಮವಾಗಿ ಆರ್‌ಸಿಬಿ ಮ್ಯಾಕ್ಸ್‌ವೆಲ್ 23, ಶಬಾಜ್ ಅಹ್ಮದ್ 26 ರನ್‌ಗಳ ಕೊಡುಗೆಯಿಂದ 6 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು.
ಆರ್‌ಸಿಬಿ ಲೈನ್ & ಲೆಂಥ್ ಬೌಲಿಂಗ್‌ಗೆ ಅದುರಿದ ಲಕ್ನೋ
182 ರನ್ ಗುರಿ ಬೆನ್ನತ್ತಿದ ಲಕ್ನೋಗೆ ಆರ್‌ಸಿಬಿ ಲೈನ್ & ಲೆಂಥ್ ಸ್ಪೆಷಲಿಸ್ಟ್‌ ಬೌಲರ್ ಜೋಶ್ ಹೇಜಲ್‌ವುಡ್ ಕೈ ಹಿಡಿದರು.

ಮೊದಲೆರಡು ವಿಕೆಟ್‌ಗಳನ್ನು ಬಹುಬೇಗ ಪಡೆದ ಹೇಜಲ್‌ವುಡ್‌ ತಮ್ಮ ಖಡಕ್ ಬೌಲಿಂಗ್ ದಾಳಿ ಮೂಲಕ ಲಕ್ನೋ ಬ್ಯಾಟರ್‌ಗಳನ್ನ ಪೆವಿಲಿಯನ್‌ಗೆ ಅಟ್ಟಿದರು.

ಕ್ವಿಂಟನ್ ಡಿಕಾಕ್, ಮನೀಶ್ ಪಾಂಡೆ ಜೊತೆಗೆ ಕೆಳಕ್ರಮಾಂಕದ ಸ್ಫೋಟಕ ಬ್ಯಾಟರ್‌ಗಳಾದ ಆಯುಷ್ ಬದೋನಿ ಮತ್ತು ಮಾರ್ಕಸ್ ಸ್ಟೋಯ್ನಿಸ್‌ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈತನ ಜೊತೆಗೆ ಹರ್ಷಲ್ ಪಟೇಲ್ ತನ್ನ ಸ್ಥಿರ ಪ್ರದರ್ಶನದ ಮೂಲಕ ಕೆ.ಎಲ್ ರಾಹುಲ್, ಜೇಸನ್ ಹೋಲ್ಡರ್‌ನಂತಹ ಪ್ರಮುಖ ವಿಕೆಟ್ ಪಡೆದರು. ಇನ್ನು ಮೊಹಮ್ಮದ್ ಸಿರಾಜ್ ಮತ್ತು ಮ್ಯಾಕ್ಸ್‌ವೆಲ್ ತಲಾ 1 ವಿಕೆಟ್ ಪಡೆಯುವುದರ ಜೊತೆಗೆ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

ಆರ್‌ಸಿಬಿಯ ಬೊಂಬಾಟ್ ಬೌಲಿಂಗ್ ದಾಳಿಗೆ ಲಕ್ನೋ ಸೂಪರ್ ಜೈಂಟ್ಸ್ ಕೇವಲ 168ರನ್‌ಗಳಿಸುವಷ್ಟರಲ್ಲಿ ಶಕ್ತವಾಯಿತು. ಆರ್‌ಸಿಬಿ 18ರನ್‌ಗಳ ಗೆಲುವಿನ ನಗಾರಿ ಬಾರಿಸಿದೆ. ಜೊತೆಗೆ ಅಮೂಲ್ಯ 2 ಪಾಯಿಂಟ್ಸ್ ತನ್ನ ಅಕೌಂಟ್‌ಗೆ ಜಮಾ ಮಾಡಿಕೊಂಡಿದೆ.

ಆರ್‌ಸಿಬಿ ಪಂದ್ಯ ವೀಕ್ಷಿಸಲು ಆಗಮಿಸಿದ ಕೆಜಿಎಫ್‌ನ ಅಧೀರ
ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದಲ್ಲಿ ಸ್ಟೇಡಿಯಂನಲ್ಲಿ ವಿಶೇಷವಾಗಿ ಅತಿಥಿಗಳು ಕಾಣಿಸಿಕೊಂಡರು.

ಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ, ವಿಶ್ವದಾದ್ಯಂತ ಧೂಳೆಬ್ಬಿಸುತ್ತಿರುವ ಕನ್ನಡ ಚಿತ್ರ ಕೆಜಿಎಫ್-2 ಸಿನಿಮಾದ ಖಳನಟ ಅಧೀರ ಪಾತ್ರ ಸಂಜಯ್ ದತ್ ಮತ್ತು ರಿಮಿಕಾ ಸೇನ್ ಪಾತ್ರ ನಿರ್ವಹಿಸಿದ ಬಾಲಿವುಡ್ ಖ್ಯಾತ ನಟಿ ರವೀನಾ ಟಂಡನ್ ಪಂದ್ಯ ವೀಕ್ಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...