Thursday, August 13, 2026
Thursday, August 13, 2026

ಮಾನವ ಸಂವೇದನೆಗಳ ಡಿಜಿಟಲ್ ಪ್ರದರ್ಶನ

Date:

ಸೈನ್ಸ್‌ ಗ್ಯಾಲರಿ ಬೆಂಗಳೂರು ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮಾನವನ ಮನಸ್ಸು, ಆಲೋಚನೆ ಹಾಗೂ ಆತನ ಭಾವನೆಯ ಸಂಕೀರ್ಣತೆಗಳ
ಕುರಿತಾಗಿ ಡಿಜಿಟಲ್ ಪ್ರದರ್ಶನವನ್ನ ಈಗಾಗಲೇ ಏಪ್ರಿಲ್ 8 ರಿಂದಲೇ ಆರಂಭಿಸಿದೆ.

ಈ ಪ್ರದರ್ಶನವು ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಸಂದರ್ಭಗಳಲ್ಲಿ ಮಾನವ ಮನಸ್ಸಿನ ಸಂಕೀರ್ಣತೆಗಳನ್ನ ಪರಿಶೋಧಿಸುತ್ತದೆ.

ಈ ಕಾರ್ಯಕ್ರಮವನ್ನು ನಿಮಾನ್ಸ್‌, ವೆಲ್‌ಕಮ್ ಟ್ರಸ್ಟ್ ಇಂಡಿಯಾ ಅಲಯನ್ಸ್‌, ದಿ ವೆಲ್‌ಬೀಯಿಂಗ್ ಪ್ರಾಜೆಕ್ಟ್‌ ಮತ್ತು ಮ್ಯೂಸಿಯಂ ಡಾ. ಗಿಸ್ಕೈನ್ ಘೆಂಟ್ ಸಹಯೋಗದಲ್ಲಿ ಈ ಡಿಜಿಟಲ್ ಪ್ರದರ್ಶನವನ್ನ ಆಯೋಜಿಸಲಾಗಿದೆ.

ಸೈನ್ಸ್‌ ಗ್ಯಾಲರಿ ಬೆಂಗಳೂರು ಯುವ ವಯಸ್ಕರನ್ನು ಗುರಿಯಾಗಿಸಿಕೊಂಡು ಆಗಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ಸಂಸ್ಥೆಯಾಗಿದೆ. ಇದನ್ನ ಕರ್ನಾಟಕ ಸರ್ಕಾರ ಮತ್ತು 3 ಶೈಕ್ಷಣಿಕ ಪಾಲುದಾರರ ಬೆಂಬಲದೊಂದಿಗೆ ಸ್ಥಾಪಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್, ಮತ್ತು ಸೃಷ್ಟಿ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿ ಈ 2 ಸಂಸ್ಥೆಯು ಗ್ಲೋಬಲ್ ಸೈನ್ಸ್ ಗ್ಯಾಲರಿ ನೆಟ್‌ವರ್ಕ್‌ನ ಸದಸ್ಯರಾಗಿದ್ದಾರೆ. ಇನ್ನು ಈ ಸೈನ್ಸ್‌ ಗ್ಯಾಲರಿಗಳು ಅಟ್ಲಾಂಟಾ, ಡೆಟ್ರಾಯಿಟ್, ಡಬ್ಲಿನ್, ಲಂಡನ್, ಮೆಲ್ಬೋರ್ನ್, ರೋಟರ್‌ಡ್ಯಾಮ್ ಮತ್ತು ಬರ್ಲಿನ್‌ನಲ್ಲಿಯೂ ಇದೆ.

ಸೈನ್ಸ್ ಗ್ಯಾಲರಿ ಬೆಂಗಳೂರು ಸಂಸ್ಥೆಯು ವಿಜ್ಞಾನವನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಭಾಷೆಯ ಸಮಸ್ಯೆಯಿಂದ ಉಂಟಾಗುವ ಸಮಸ್ಯೆಗಳನ್ನ ತಪ್ಪಿಸಲು ಬೇರೆ ಬೇರೆ ಭಾಷೆಗಳಲ್ಲೂ ಡಿಜಿಟಲ್ ಪ್ರದರ್ಶನ ನೀಡಲು ಮುಂದಾಗಿದೆ. ಈ ಮೂಲಕ ವಿವಿಧ ಭಾಷೆಯ ಪ್ರೇಕ್ಷಕರನ್ನ ಈ ಕಾರ್ಯಕ್ರಮದಲ್ಲಿ ಒಳಗೊಳ್ಳಲು ಸಂಸ್ಥೆ ಈ ಯೋಜನೆ ಮಾಡಿದೆ. ಸದ್ಯಕ್ಕೆ ಸೈನ್ಸ್‌ ಗ್ಯಾಲರಿಗೆ ಸಂಬಂಧಿಸಿದ 6 ಚಲನಚಿತ್ರಗಳು ಹಾಗೂ 10 ಡಿಜಿಟಲ್ ಪ್ರದರ್ಶನಗಳನ್ನ ನೀಡಲಾಗುತ್ತಿದೆ. ಇದರ ಜೊತೆಗೆ ಕಾರ್ಯಾಗಾರಗಳು, ಮಾಸ್ಟರ್‌ಕ್ಲಾಸ್‌ಗಳು ಮತ್ತು ಸಾರ್ವಜನಿಕ ಉಪನ್ಯಾಸಗಳು ಸೇರಿದಂತೆ ಲೈವ್ ಕಾರ್ಯಕ್ರಮಗಳು ಕೂಡ ನಡೆಯಲಿದೆ.

ಸೈನ್ಸ್ ಗ್ಯಾಲರಿ ಬೆಂಗಳೂರಿನ ಸ್ಥಾಪಕಿ, ನಿರ್ದೇಶಕಿ ಜಾಹ್ನವಿ ಫಾಲ್ಕಿ ಅವರು ಸೈನ್‌ ಗ್ಯಾಲರಿ ಕುರಿತು ಮಾತನಾಡಿದ್ದು, ಭಾರತೀಯ ಭಾಷೆಗಳಲ್ಲಿ ರೋಮಾಂಚಕ ಬೌದ್ಧಿಕ ಜೀವನವನ್ನು ರಚಿಸಲು ನಾವೆಲ್ಲರೂ ನಮ್ಮ ಕೈಲಾದಷ್ಟು ಮಾಡಬೇಕು. ಭಾಷೆಗಳನ್ನು ಜೀವಂತವಾಗಿಡಲು ಮತ್ತು ನಮ್ಮ ಸಂಸ್ಕೃತಿಗಳನ್ನು ಬೆಳೆಸಲು ಇದು ಏಕೈಕ ಮಾರ್ಗವಾಗಿದೆ. ಇದಕ್ಕಾಗಿ ಸೈನ್ಸ್ ಗ್ಯಾಲರಿ ಬೆಂಗಳೂರಿನಲ್ಲಿ, ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ನಮ್ಮ ಸಂಸ್ಥೆ ಬದ್ಧವಾಗಿದೆ. ಅಲ್ಲದೆ ಇದನ್ನ ಇತರ ಭಾರತೀಯ ಭಾಷೆಗಳಿಗೂ ವಿಸ್ತರಿಸುತ್ತೇವೆ. ಒಟ್ಟಾರೆ ಸೈನ್ಸ್‌ ಗ್ಯಾಲರಿಯನ್ನು ಸಾರ್ವಜನಿಕ ಸಂಸ್ಥೆಯಂತೆ ರೂಪಿಸುವುದೇ ನಮ್ಮ ಸಂಸ್ಥೆಯ ಏಕೈಕ ಗುರಿಯಾಗಿದೆ, ಎಂದು ಜಾಹ್ನವಿ ಫಾಲ್ಕಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...