Wednesday, March 19, 2025
Wednesday, March 19, 2025

ಬ್ರಹ್ಮೋಸ್ ಕ್ಷಿಪಣಿ ಡಬಲ್ ಹಿಟ್ ಯಶಸ್ವಿ ಪರೀಕ್ಷಾರ್ಥ ಪ್ರಯೋಗ

Date:

ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

ಇದರಿಂದಾಗಿ ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ.

ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ ವಿಮಾನದ ಮೂಲಕ ನಿಖರ ಗುರಿ ತಲುಪುವ ಪರೀಕ್ಷೆ ಮಾಡಿತ್ತು.

ಈ ವೇಳೆ ಮೊದಲು ನೌಕಾ ಮಾರ್ಗವಾಗಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು.

ಭಾರತೀಯ ವಾಯುಪಡೆ ಯುದ್ಧ ನೌಕೆ ಮತ್ತು ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ.

ಎರಡೂ ಪರೀಕ್ಷೆಯಲ್ಲಿ ಒಂದೇ ಗುರಿ ನಿಗದಿ ಪಡಿಸಲಾಗಿತ್ತು.
ಎರಡೂ ಮಾರ್ಗದಲ್ಲಿ ಒಂದೇ ಗುರಿಯನ್ನು ಧ್ವಂಸ ಮಾಡುವಲ್ಲಿ ಕ್ಷಿಪಣಿ ಯಶಸ್ವಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಸೇನೆ ಮತ್ತು ನೌಕಾದಳದ ಅಧಿಕಾರಿಗಳು, ಕ್ಷಿಪಣಿಯು ಪ್ರತೀ ಗಂಟೆಗೆ 3000 ಕಿ.ಮೀ ವೇಗದಲ್ಲಿ ಗುರಿಯನ್ನು ನಿಖರವಾಗಿ ಧ್ವಂಸ ಮಾಡಿದೆ. ಕ್ಷಿಪಣಿಯ ಈ ವೇಗವು ಶತ್ರುರಾಷ್ಟ್ರಗಳ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಪ್ಪಿಸಿಕೊಂಡು ಗುರಿಯನ್ನು ತಲುಪಲು ನೆರವಾಗುತ್ತದೆ. ಈ ವೇಗದಲ್ಲಿ ಕ್ಷಿಪಣಿಯನ್ನು ಗುರುತಿಸುವುದೂ ಕೂಡ ಕಷ್ಟಕರವಾಗುತ್ತದೆ ಎಂದು ಹೇಳಿದ್ದಾರೆ.

ಐಎನ್‌ಎಸ್ ಡೆಲ್ಲಿ ಯುದ್ಧನೌಕೆ ಮೂಲಕ ಕ್ಷಿಪಣಿ ಪ್ರಯೋಗ ಮಾಡಲಾಗಿದೆ. ಈ ವೇಳೆ ಕ್ಷಿಪಣಿಗೆ ಗುರಿಯಾಗಿ ಮತ್ತೊಂದು ನೌಕೆಯನ್ನು ನೀಡಲಾಗಿತ್ತು. ಮೊದಲ ಪರೀಕ್ಷೆಯಲ್ಲಿ ನೌಕೆಯನ್ನು ಹೊಡೆದುರುಳಿಸುವಲ್ಲಿ ಕ್ಷಿಪಣಿ ಯಶಸ್ವಿಯಾಗಿತ್ತು.

ಬಳಿಕ ಭಾರತೀಯ ವಾಯುಪಡೆಯ Su-30MKI ಯುದ್ಧ ವಿಮಾನದ ಮೂಲಕ ವಾಯುನೆಲೆಯಿಂದ ಹೊರಟು ಅದೇ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ವೇಳೆಯೂ ಬ್ರಹ್ಮೋಸ್ ಕ್ಷಿಪಣಿ ಹಡಗನ್ನು ಯಶಸ್ವಿಯಾಗಿ ಹೊಡೆದರುಳಿಸಿತ್ತು.

ಇನ್ನು ಸಿಡಿತಲೆಯೊಂದಿಗೆ ಕ್ಷಿಪಣಿ ಸತತ ಎರಡು ಬಾರಿ ಹೊಡೆದ ಪರಿಣಾಮ ಹಡಗು ಭಾರಿ ಹಾನಿಗೀಡಾಗಿ ಸಮುದ್ರದಲ್ಲೇ ಮುಳುಗಿತು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...