Sunday, May 17, 2026
Sunday, May 17, 2026

ಗುಜರಾತ್ ದಾಹೋದ್ ನಲ್ಲಿ ಪ್ರಧಾನಿ ಮೋದಿ ಪ್ರವಾಸ

Date:

ಗುಜರಾತ್ ನ ದಾಹೋದ್ ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.

ದಾಹೋದ್ ನ ರೈಲ್ವೆ ಉತ್ಪಾದನಾ ಘಟಕದಲ್ಲಿ 9 ಸಾವಿರ ಎಚ್.ಪಿ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಉತ್ಪಾದನಾ ಯೋಜನೆ ಇವುಗಳಲ್ಲಿ ಸೇರಿವೆ. 1926 ರಲ್ಲಿ ಸ್ಥಾಪನೆಯಾಗಿರುವ ದಾಹೋದ್ ರೈಲ್ವೆ ಕಾರ್ಯಾಗಾರವನ್ನು ಸ್ಟೀಮ್ ಲೋಕೊಮೋಟಿವ್ಸ್ನಿಂದ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ಗೆ ಪರಿವರ್ತಿಸುವ ಉತ್ಪಾದನಾ ಯೋಜನೆಯು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣವಾಗಲಿದೆ. ಈ ಯೋಜನೆಯು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ನೀಡಲಿದೆ ಎಂದು ತಿಳಿದುಬಂದಿದೆ.

335 ಕೋಟಿ ರೂಪಾಯಿ ವೆಚ್ಚದ ದಾಹೋದ್ ಸ್ಮಾರ್ಟ್ಸಿಟಿ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ದಾಹೋದ್ ಮತ್ತು ಪಂಚಮಹಲ್ ಜಿಲ್ಲೆಗಳ 10 ಸಾವಿರ ಬುಡಕಟ್ಟು ಜನಾಂಗಗಳಿಗೆ 120ಕೋಟಿ ರೂಪಾಯಿ ಮೊತ್ತದ ಪ್ರಯೋಜನಗಳನ್ನು ಒದಗಿಸುವ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು.

ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ದಾಹೋದ್ ಜಿಲ್ಲೆಯಲ್ಲಿ ಮೊದಲ ದಿನದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಾಹೋದ್ ನಗರವು ಮೇಕ್ ಇನ್ ಇಂಡಿಯಾದ ಬಹುದೊಡ್ಡ ಕೇಂದ್ರವಾಗಿ ಬದಲಾಗುತ್ತಿದೆ. 20ಸಾವಿರ ಕೋಟಿ ರೂಪಾಯಿ ವೆಚ್ಚದ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಉತ್ಪಾದನಾ ಕೇಂದ್ರವು ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ನಾಂದಿಯಾಡಲಿದೆ ಎಂದರು.

ನರ್ಮದಾ ಜಲಾನಯನ ಭಾಗದಿಂದ ಕುಡಿಯುವ ನೀರು ಪೂರೈಸುವ 1ಸಾವಿರದ 400 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ದಾಹೋದ್ ಜಿಲ್ಲೆಯ 280 ಹಳ್ಳಿಗಳು ಮತ್ತು ದೇವಗಢ ನಗರಕ್ಕೆ ಈ ಯೋಜನೆಯು ನೀರು ಪೂರೈಸಲಿದೆ ಎನ್ನಲಾಗುತ್ತಿದೆ.

ಆದಿ ಜಾತಿ ಮಹಾಸಮ್ಮೇಳನ ಉದ್ದೇಶಿಸಿ ಮಾತನಾಡಿ, ಹೊರ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ ಹಾಗಾಗಿ, ದಾಹೋದ್ ನ ಲೋಕೊಮೋಟಿವ್ಸ್ ಉತ್ಪಾದನಾ ಕೇಂದ್ರವು ಈ ಬೇಡಿಕೆಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ ಎಂದರು.

ದಾಹೋದ್ ಜಿಲ್ಲೆಯ ಬುಡಕಟ್ಟು ಜನಾಂಗಗಳ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನೀರು ಪೂರೈಕೆ ಯೋಜನೆಗಳು ಸಹಾಯಕವಾಗಲಿದೆ. ಕೇಂದ್ರ ಸರ್ಕಾರ ಈ ಬುಡಕಟ್ಟು ಜನಾಂಗಗಳ ಮಕ್ಕಳಿಗೆ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಒದಗಿಸಲು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...