Wednesday, October 2, 2024
Wednesday, October 2, 2024

ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡುವಂತಿಲ್ಲ-ಬೊಮ್ಮಾಯಿ

Date:

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ಸಮಿತಿಯನ್ನು ಕೆಟಿಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ . ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿ ಕಾಯ್ದೆಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ ಗಳಿಗೂ ಈ ನಿಯಮ ಜಾರಿಯಾಗುತ್ತದೆ. ಟೆಂಡರ್ ಗಳು ಹೆಚ್ಚಾದ ಸಂದರ್ಭದಲ್ಲಿ ಶೀಘ್ರ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯೊಂದನ್ನೂ ರಚಿಸಲಾಗುವುದು ಎಂದರು.

ಮೌಖಿಕ ಆದೇಶದ ಮೇಲೆ ಕಾಮಗಾರಿಗಳು ಮಾಡುವಂತಿಲ್ಲ:
ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳು ಮೌಖಿಕ ಆದೇಶಗಳ ಮೇಲೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೂ ಈ ರೀತಿ ನಡೆದರೆ ಸಂಬಂಧಪಟ್ಟ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಎಇಇ,ಶಾಖಾಧಿಕಾರಿಗಳು ಜವಾಬ್ದಾರರಾಗುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ಇಓಗಳು ಜವಾಬ್ದಾರರಾಗುತ್ತಾರೆ ಎಂದು ಸ್ಪಷ್ಟವಾದ ಲಿಖಿತ ಸೂಚನೆ ನೀಡಲಾಗುವುದು ಎಂದರು.

ಸಂತೋಷ್ ಪಾಟೀಲ್ ಪ್ರಕರಣ-ತನಿಖೆ ನಡೆಯುತ್ತಿದೆ.
ಟೆಂಡರ್ ಪ್ರಕ್ರಿಯೆ ಹಾಗೂ ಪರ್ಸೆಂಟೇಜ್ ರಹಿತ ವ್ಯವಸ್ಥೆಗೆ ಸರ್ಕಾರ ಕ್ರಮ ಕೈಗೊಂಡಿದೆಯೇ, ಸಂತೋಷ್ ಪಾಟೀಲ್ ಆತ್ಮಹತ್ಯೆ ಒಂದು ಪಾಠವಾಗಿ ಇವೆಲ್ಲಕ್ಕೆ ಒಂದು ತಾತ್ವಿಕ ಅಂತ್ಯ ಕಾಣಬೇಕು ಎಂಬುದಕ್ಕೆ ಪ್ರತಿಕ್ರಿಯಿಸಿ ಪರ್ಸಂಟೇಜ್ ಅನ್ನುವಂಥದ್ದು ವ್ಯಾಪಕವಾಗಿ ಮಾತನಾಡುವಂತಹ ವಿಚಾರ. ಇದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಸಂತೋಷ್ ಪಾಟೀಲ್ ಪ್ರಕರಣ ಪ್ರತ್ಯೇಕವಾದುದು. ಇದರಲ್ಲಿ ಕಾರ್ಯಾದೇಶವಿಲ್ಲದೇ ಕೆಲಸ ಮಾಡಿ ಬಿಲ್ ಕ್ಲೇಮು ಮಾಡಿರುವುದು ಆದ್ದರಿಂದ ಈ ಬಗ್ಗೆ ಆರ್ ಡಿ ಪಿಆರ್ ನಿಂದ ಹಿಡಿದು ಪೊಲೀಸ್ ಇಲಾಖೆವರೆಗೆ ತನಿಖೆ ನಡೆಯುತ್ತಿದೆ. ಇವೆರಡೂ ವಿಷಯಗಳಿಗೆ ಹೋಲಿಕೆ ಇಲ್ಲ ಎಂದರು.

ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು.
ಸಂತೋಷ್ ಪಾಟೀಲ್ ಅವರ 2 ರಿಂದ 3 ಕೋಟಿ ರೂ.ಗಳ ಕಾಮಗಾರಿ ಪ್ರಕರಣವಾಗಿದೆ. ಆದ್ದರಿಂದ ಜಿಲ್ಲಾ ಮಟ್ಟದಲ್ಲಿ 50 ಕೋಟಿ ರೂ. ಕ್ಕಿಂತ ಕಡಿಮೆ ಇರುವ ಟೆಂಡರ್ ಗಳೂ ಪರಿಶೀಲನೆಗೆ ಒಳಪಡಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಬಹುದಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ, ಉನ್ನತ ಮಟ್ಟದ ಸಮಿತಿ ಕಾರ್ಯನಿರ್ವಹಣೆಯನ್ನು ಗಮನಿಸಿ ನಂತರ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಯನ್ನು ರಚಿಸಲಾಗುವುದು. ಅಭಿವೃದ್ಧಿ ಕೆಲಸಗಳ ವೇಗವೂ ಕುಂಠಿತವಾಗಬಾರದು ಎಂದರು.

ಮಲೆನಾಡು ಪ್ರದೇಶದಲ್ಲಿ ಮಳೆಗಾಲದಲ್ಲಿ ಭೂಕುಸಿತದ ಸಮಸ್ಯೆಯ ಇರುವ ಬಗ್ಗೆ ಪ್ರಶ್ನಿಸಿದಾಗ, ಪಶ್ಚಿಮಘಟ್ಟ ದುರ್ಬಲವಾದ ವಲಯವಾಗಿದೆ. ಜಿಯೋ ಫಿಸಿಕಲ್ ಸರ್ವೆ ಮಾಡಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಭೂಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಈ ವರದಿಯನ್ನು ಪರಿಶೀಲಿಸಿದ ನಂತರ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಶೇಷವಾಗಿ ತಳಮಟ್ಟದಲ್ಲಿ ಇರುವ ಮನೆಗಳಿರುವ ಪ್ರದೇಶಗಳಲ್ಲಿ ವಿಶೇಷ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ದುರ್ಬಲ ವಲಯವಿರುವ ನಿಸರ್ಗವನ್ನು ತಡೆಯಲು ಸಾಧ್ಯವಿಲ್ಲ. ಆದ್ದರಿಂದ ಸೂಕ್ತ ಪ್ಲಾನಿಂಗ್ ನ ಅವಶ್ಯಕತೆ ಇದೆ ಎಂದರು.

ಗ್ರಾಮೀಣ ಭಾಗದಲ್ಲಿ ವಿದ್ಯುತ್ಛಕ್ತಿಯ ಸಮಸ್ಯೆ ಹೆಚ್ಚಿದೆ ಎಂಬುದಕ್ಕೆ ಉತ್ತರಿಸಿ, ಕರ್ನಾಟಕದಲ್ಲಿ ವಿದ್ಯುತ್ ಹೇರಳವಾಗಿದೆ. ಆದರೆ ವಿತರಣೆಯ ಸಮಸ್ಯೆಯಿದೆ. ಬಹಳ ವರ್ಷಗಳಿಂದ ಸರ್ಕಾರಗಳು ವಿತರಣಾ ವ್ಯವಸ್ಥೆ , ಟ್ರಾನ್ಸ್ಮಿಷನ್ ಬಗ್ಗೆ ಗಮನಹರಿಸಿಲ್ಲ. ಆದ್ದರಿಂದ 100 ವಿದ್ಯುತ್ ಸ್ಟೇಷನ್ ಗಳ ಸ್ಥಾಪನೆಗೆ ಮಂಜೂರಾತಿ ನೀಡಿದ್ದು ಕಾಮಗಾರಿಗಳು ಪ್ರಾರಂಭವಾಗಲಿವೆ. ಉತ್ತರ ಕರ್ನಾಟಕ ಪ್ರದೇಶದಲ್ಲಿ ವಿದ್ಯುತ್ ವಿತರಣೆಯಲ್ಲಿ ಸಮಸ್ಯೆ ಇದೆ.ಇಂತಹ ಪ್ರದೇಶದಲ್ಲಿ ಸ್ಟೇಷನ್ ಮತ್ತು ಟ್ರಾನ್ಸ್ ಮಿಷನ್ ವ್ಯವಸ್ಥೆಗೆ ಹೆಚ್ಚಿನ ಅನುದಾನವನ್ನು ನೀಡಿ ಕಾಮಗಾರಿಗಳನ್ನು ಪೂರೈಸಲಾಗುವುದು. ಸಣ್ಣಪುಟ್ಟ ಸಮಸ್ಯೆಗಳಿಂದ ಕೆಲವೆಡೆ ಸ್ಟೇಷನ್ ಸ್ಥಾಪನೆ ವಿಳಂಬವಾಗುತ್ತಿದ್ದು, ಭೂ ಸ್ವಾಧೀನ ಸೇರಿದಂತೆ ಇತರೆ ಸಮಸ್ಯೆಗಳನ್ನು ತಕ್ಷಣ ನಿವಾರಿಸಿ, ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಯೋಜನೆಯಂತೆ ಯಾವೆಲ್ಲಾ ಗ್ರಿಡ್ ಗಳಲ್ಲಿ ಸೌರಶಕ್ತಿಯ ಬಳಕೆ ಮಾಡಬಹುದು ಅಂತಹ ಗ್ರಿಡ್ ಗಳಲ್ಲಿ ಸೌರಶಕ್ತಿಯ ಸರಬರಾಜಿಗೆ ಅವಕಾಶ ಕಲ್ಪಿಸಿದ್ದಾರೆ. ಸೋಲಾರ್ ಪಂಪ್ ಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲು ವಿಶೇಷ ರಿಯಾಯಿತಿಯನ್ನು ನೀಡಿದ್ದಾರೆ. ಈ ಸೋಲಾರ್ ವ್ಯವಸ್ಥೆಗೆ ಸಹಾಯಧನ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುವುದು. ಇವೆಲ್ಲಾ ಕ್ರಮಗಳಿಂದ ವಿದ್ಯುಚ್ಛಕ್ತಿ ಸಬರಾಜಿನ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದರು.

ಜಾತಿಗಣತಿ ವರದಿ ಇನ್ನೂ ಬಹಿರಂಗವಾಗದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿ ಪೂರ್ಣ ಪ್ರಮಾಣದಲ್ಲಿ ಮಂಡನೆಯಾಗಿಲ್ಲ. ಈ ಬಗ್ಗೆ ಹಿಂದುಳಿದ ವರ್ಗದ ಆಯೋಗಕ್ಕೆ ವರದಿ ಮಂಡನೆಗೆ ಸೂಚನೆ ನೀಡಲಾಗಿದೆ. ದೀರ್ಘಕಾಲೀನ ಪರಿಣಾಮಗಳಿರುವಂತಹ ಇಂತಹ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...