Tuesday, October 1, 2024
Tuesday, October 1, 2024

ಬಯಲಲ್ಲಿ ಮಾತ್ರ ಭೇದ ಜೈಲಲ್ಲಿ ನಾವೆಲ್ಲ ಒಂದೇ

Date:

ದೇಶದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮಧ್ಯೆ ದ್ವೇಷದ ಭಾವನೆ ಬಿತ್ತಲಾಗುತ್ತಿರುವುದು ಈಗ ಎಲ್ಲೆಡೆ ಕಂಡು ಬರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಈ ಘಟನೆಯು ಮಾನವೀಯತೆಯ ಮೇಲಿನ ನಮ್ಮ ನಂಬಿಕೆಯನ್ನು ಮತ್ತೊಮ್ಮೆ ಸ್ಥಾಪಿಸುತ್ತಿದೆ.

ಉತ್ತರ ಪ್ರದೇಶದ ಈ ಜೈಲಿನಲ್ಲಿ ಖೈದಿಗಳು ಕೋಮು ಸೌಹಾರ್ದತೆ ಮೆರೆದಿದ್ದಾರೆ.
ಬಾರಾಬಂಕಿ ಜೈಲಿನಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂಗಳು ಮತ್ತು ಮುಸ್ಲಿಂ ಖೈದಿಗಳು ಒಟ್ಟಾಗಿ ಉಪವಾಸ ಮುರಿಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಜೈಲು ಆಡಳಿತ ಸಿಬ್ಬಂದಿಯೇ ಇಫ್ತಾರ್ ಕೂಟ ಆಯೋಜಿಸಿದ್ದರು. ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿವಿಧ ಧರ್ಮಗಳ ನಡುವಿನ ಈ ಸಾಮರಸ್ಯವನ್ನು ಕಂಡು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಏಕತೆಯ ಶಕ್ತಿ ಅಂತೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕಾಲದಲ್ಲಿ ಹೊರಗಿಗಿಂತ ಜೈಲಿನಲ್ಲಿ ಹೆಚ್ಚು ಮಾನವೀಯತೆ ಉಳಿದಿದೆ ಎಂದು ತೋರುತ್ತದೆ ಅಂತೆಲ್ಲಾ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...