Wednesday, March 25, 2026
Wednesday, March 25, 2026

ಕಾಂಗ್ರೆಸ್ ಪಕ್ಷಕ್ಕೆ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜ್ಞಾನೇಂದ್ರ

Date:

ನಾನು ಡಮ್ಮಿ ಗೃಹಸಚಿವ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಯಾವ ಪ್ರಕರಣದಲ್ಲೂ ಗೃಹ ಇಲಾಖೆ ವಿಳಂಬ ನೀತಿ ಅನುಸರಿಸಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜಕಾರಣದಲ್ಲಿ ಟೀಕೆ ಮಾಡಲೂ ಒಂದು ಇತಿ-ಮಿತಿ ಇರಬೇಕು. ಎದುರಾಳಿ ಕೂಡಾ ಹೌದು ಎನ್ನುವ ರೀತಿಯಲ್ಲಿ ಟೀಕೆ ಅಥವಾ ಆರೋಪ ಮಾಡಬೇಕು. ಎಲ್ಲ ದುರ್ಘ‌ಟನೆಗಳಿಗೂ ತತ್‌ಕ್ಷಣ ಕ್ರಮವಾಗಿದೆ ಎಂದರು.

ಹಿಂದೆ ನನ್ನದೇ ಕ್ಷೇತ್ರದವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಪ್ರಶ್ನೆ ಪತ್ರಿಕೆ ಹಗರಣ ನಡೆಯಲಿಲ್ಲವೇ? ಎಷ್ಟು ಬಾರಿ ಪರೀಕ್ಷೆ ಮುಂದೂಡಲಾಗಿತ್ತು. ಅದೇ ರೀತಿ ಕಾಂಗ್ರೆಸ್‌ ಸರಕಾರ ಇದ್ದಾಗ ರಾಜ್‌ಕುಮಾರ್‌ ನಿಧನವಾಗಿತ್ತು. ಅವರ ಅಂತ್ಯಸಂಸ್ಕಾರ ಸಂದರ್ಭ 6 ಜನ ಮೃತಪಟ್ಟಿದ್ದರು. ಆದರೆ ಪುನೀತ್‌ ಅಂತ್ಯಸಂಸ್ಕಾರ ವೇಳೆ 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಜಮಾಯಿಸಿದ್ದರೂ ಯಾವುದೇ ಗಲಾಟೆ ನಡೆಯದಂತೆ ನಮ್ಮ ಸರಕಾರ ಸಮರ್ಥವಾಗಿ ನಿಭಾಯಿಸಿತ್ತು. ತಮ್ಮಲ್ಲಿ ತಪ್ಪಿಟ್ಟುಕೊಂಡು ಕಾಂಗ್ರೆಸ್‌ನವರು ಮತ್ತೂಬ್ಬರ ಮೇಲೆ ಗೂಬೆ ಕೂರಿಸುವಲ್ಲಿ ನಿರತರಾಗಿದ್ದಾರೆ ಎಂದು ಆರಗ ಜ್ಞಾನೇಂದ್ರ ಹೇಳಿದರು .

ಕಾಂಗ್ರೆಸ್‌ ಸರಕಾರದಲ್ಲಿ ಗೃಹ ಸಚಿವರನ್ನು ಡಮ್ಮಿಯಾಗಿ ಇಟ್ಟುಕೊಳ್ಳಲಾಗಿತ್ತು.
ಆದರೆ, ಬಿಜೆಪಿ ಸರಕಾರದಲ್ಲಿ ಗೃಹ ಸಚಿವರನ್ನು ಡಮ್ಮಿಯಾಗಿ ನಡೆಸಿಕೊಳ್ಳುತ್ತಿಲ್ಲ. ಸರಕಾರದ ಭಾಗವಾಗಿ ಗೃಹ ಖಾತೆಯನ್ನು ಸ್ವತಂತ್ರವಾಗಿ ನಿಭಾಯಿಸುತ್ತಿದ್ದೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...