Saturday, December 6, 2025
Saturday, December 6, 2025

ಪಾನ್ ಮಸಾಲ ಜಾಹೀರಾತಿನಿಂದ ಹಿಂದೆ ಸರಿದ ನಟ ಅಕ್ಷಯ್

Date:

ಸದಾ ಕಾಲ ಫಿಟ್ನೆಸ್ ಬಗ್ಗೆ ಮಾತನಾಡುವ, ಶಿಸ್ತಿನ ಜೀವನ ನಡೆಸುವ, ಇತರರಿಗೂ ಮಾದರಿ ಆಗಿರುವ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರು ವಿಮಲ್ ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿರುವುದು ಸರಿಯಲ್ಲ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ.

ಅದರ ಬೆನ್ನಲ್ಲೇ ಅಕ್ಷಯ್​ ಕುಮಾರ್​ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ವಿಮಲ್​ ಜಾಹೀರಾತಿನಲ್ಲಿ ಇನ್ಮುಂದೆ ನಟಿಸುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್, ನನ್ನನ್ನು ಕ್ಷಮಿಸಿ. ಎಲ್ಲಾ ಆಪ್ತರಿಗೂ, ಅಭಿಮಾನಿಗಳಿಗೂ ನಾನು ಕ್ಷಮೆ ಕೇಳಲು ಬಯಸುತ್ತೇನೆ. ಕಳೆದ ಕೆಲ ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆ ನನ್ನ ಮೇಲೆ ಆಳ ಪ್ರಭಾವ ಬೀರಿದೆ. ಇನ್ನು ಮುಂದೇ ಯಾವುದೇ ತಂಬಾಕು ಜಾಹೀರಾತಿನಲ್ಲಿ ನಟಿಸುವುದಿಲ್ಲ. ವಿಮಲ್ ಎಲೈಚಿ ಸಂಸ್ಥೆಯೊಂದಿಗಿನ ನನ್ನ ಒಡನಾಟ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಗೌರವಿಸುತ್ತೇನೆ. ಆದ್ದರಿಂದ ಈ ಜಾಹೀರಾತಿನಿಂದ ಹಿಂದೆ ಸರಿಯುತ್ತಿದ್ದೇನೆ. ಇದರಿಂದ ಗಳಿಸಿದ ಹಣವನ್ನು ಉತ್ತಮ ಕೆಲಸಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈಗಾಗಲೇ ಬ್ರ್ಯಾಂಡ್ ಆಗಿರೋ ಕಾರಣ ಕಾನೂನಿನ ನಿಯಮಗಳ ಅನ್ವಯ ಜಾಹೀರಾತು ಪ್ರಸಾರ ಆಗಲಿದೆ. ಮುಂದಿನ ಜಾಹೀರಾತು ಆಯ್ಕೆಗಳನ್ನು ಮಾಡೋ ಸಂದರ್ಭದಲ್ಲಿ ಉತ್ತಮವಾಗಿ ಗಮನ ಹರಿಸುತ್ತೇನೆ ಎಂದು ಭರವಸೆ ನೀಡುತ್ತೇನೆ. ಪ್ರತಿಯಾಗಿ ನಾನು ನಿಮ್ಮ ಪ್ರೀತಿ ಮತ್ತು ಶುಭಾಶಯಗಳನ್ನು ನೀಡಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಶಾರುಖ್​, ಅಜಯ್​ ದೇವಗನ್​, ಅಕ್ಷಯ್​ ಕುಮಾರ್ ವಿಮಲ್​ ಜಾಹೀರಾತಿನಲ್ಲಿ ನಟಿಸಿದ್ದರು. ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ಪ್ರಚಾರ ಜಾಹೀರಾತಿಗಳಲ್ಲಿ ನಟಿಸಿದಕ್ಕೆ ಅಕ್ಷಯ್​ ಕುಮಾರ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...